Important
Trending

ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಹೊನ್ನಾವರ : ಪಟ್ಟಣದ ರಾಮತೀರ್ಥಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿ ಮಣಿಕಂಠ ಮಂಜುನಾಥ ನಾಯ್ಕ (17) ಎಂದು ತಿಳಿದು ಬಂದಿದ್ದು, ಪಟ್ಟಣದ ರಾಯಲಕೇರಿ ನಿವಾಸಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಅಂಚೆ ಇಲಾಖೆಯಿಂದ ನೇಮಕಾತಿ: 63 ಸಾವಿರ ವರೆಗೆ ಮಾಸಿಕ ವೇತನ

ಪಟ್ಟಣದ ಸರ್ಕಾರಿ ಮೋಹನ ಕೆ.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿ ವಿದ್ಯಾರ್ಥಿಯಾಗಿದ್ದು, ಸೋಮವಾರ ಮಳೆಯ ಕಾರಣದಿಂದ ಕಾಲೇಜಿಗೆ ರಜೆ ಇರುವುದರಿಂದ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಪೋಲೀಸರು ಸಾರ್ವಜನಿಕರ ಸಹಕಾರದಿಂದ ಶವ ಮೇಲೆತಗತಿ ತಾಲೂಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಈ ಸಂಭಂಧ ಹೊನ್ನಾವರ ಪೋಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

Back to top button