![](http://i0.wp.com/vismaya24x7.com/wp-content/uploads/2021/10/kudle-beach-gokarna.jpg?fit=621%2C414&ssl=1)
ಗೋಕರ್ಣ: ಬೆಂಗಳೂರು ಮೂಲದ ವ್ಯಕ್ತಿ ಓರ್ವ ಗೋಕರ್ಣದ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಮಾಡಿದ್ದು, ತಾನು ಉಳಿದುಕೊಂಡಿದ್ದ ರೂಂನಲ್ಲಿಯೇ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ software Engineer ರಿಷಿಕೇಶ ರೆಡ್ಡಿ (35) ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿ. ಈತ ಗೋಕರ್ಣದ ಓಂ ಬೀಚ್ ರೆಸಾರ್ಟ್ನಲ್ಲಿ ರೂಂ ಬಾಡಿಗೆಗೆ ಪಡೆದುಕೊಂಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾಗಿರುವ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ವಿಸ್ಮಯ ನ್ಯೂಸ್, ಗೋಕರ್ಣ