![ಇಕೋ ಬೀಚ್](http://i0.wp.com/vismaya24x7.com/wp-content/uploads/2023/08/eco-beach.jpg?fit=1280%2C720&ssl=1)
ಹೊನ್ನಾವರ: ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಎಡಕ್ಕೆ ತಿರುಗಿಸಿದ ಪರಿಣಾಮ ಕಾರು ಪಲ್ಟಿಯಾಗಿ ಗಟಾರದಲ್ಲಿ ಬಿದ್ದ ಘಟನೆ ತಾಲೂಕಿನ ಇಕೋ ಬೀಚ್ ಸಮೀಪ ನಡೆದಿದೆ. ಕಾರಿನಲ್ಲಿದ್ದರು ಬೆಂಗಳೂರು ಮೂಲದ ವಿದ್ಯಾರ್ಥಿಗಳಾಗಿದ್ದು, ಪ್ರವಾಸಕ್ಕೆಂದು ಆಗಮಿಸಿದ್ದರು. ಕಾರು ಚಾಲಕನ ಅಜಾಗರುಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ಆದಿತ್ಯ, ಶಿಲ್ಪ, ಆಕಾಶ,ತರುಣ, ರೊಹೇಬ್, ಖುಷಿ, ಪವನಕುಮಾರ, ಯಶವಂತ ನಾಯ್ಡು, ಮೈಸುರು ಮೂಲದ ಪ್ರೀಯಾಂಕ ಗಾಯಗೊಂಡವರಾಗಿದ್ದಾರೆ.
![](http://i0.wp.com/vismaya24x7.com/wp-content/uploads/2023/07/taranaga-2.jpg?resize=708%2C398&ssl=1)
ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನೆರೆ ಜಿಲ್ಲೆಗೆ ಕರೆದೊಯ್ಯಲಾಗಿದೆ. ಚಾಲಕ ಯಶವಂತ ನಾಯ್ಡು ವಿರುದ್ಧ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ