Uttara Kannada
Trending

ಉತ್ತರಕನ್ನಡದಲ್ಲಿ ಇಂದು 53 ಕರೊನಾ ಕೇಸ್

40 ಮಂದಿ ಗುಣಮುಖರಾಗಿ ಬಿಡುಗಡೆ
2,835ಕ್ಕೆ ಏರಿದ ಸೋಂಕಿತರ ಸಂಖ್ಯೆ

[sliders_pack id=”3498″]

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 53 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದಿನ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಹಳಿಯಾಳದಲ್ಲಿ ಅತಿಹೆಚ್ಚು ಅಂದರೆ 29 ಪ್ರಕರಣ ದಾಖಲಾಗಿದೆ. ಉಳಿದಂತೆ , ಭಟ್ಕಳದಲ್ಲಿ 6, ಕಾರವಾರದಲ್ಲಿ 4, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರದಲ್ಲಿ ತಲಾ 3 ಯಲ್ಲಾಪುರದಲ್ಲಿ 2 ಕೇಸ್ ದೃಢಪಟ್ಟಿದೆ.

ಇದೇ ವೇಳೆ, 40 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳದಲ್ಲಿ 23, ಹೊನ್ನಾವರದಲ್ಲಿ 5, ಕಾರವಾರದಲ್ಲಿ 4, ಅಂಕೋಲಾದಲ್ಲಿ 7, ಯಲ್ಲಾಪುರದಲ್ಲಿ ಓರ್ವ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 53 ಪ್ರಕರಣ ದಾಖಲಾದ ಬೆನ್ನಲ್ಲೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,835ಕ್ಕೆ ಏರಿಕೆಯಾಗಿದೆ. 882 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಮಟಾದಲ್ಲಿ ಇಂದು ಮೂರು ಪ್ರಕರಣ ದಾಖಲು:

ಕುಮಟಾ: ತಾಲೂಕಾ ವ್ಯಾಪ್ತಿಯಲ್ಲಿ ಇಂದು ಒಟ್ಟು 3 ಕರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇಂದು ದೃಡಪಟ್ಟಿರುವ ಮೂವರು ಸೋಂಕಿತರು ಕೂಡ ಗೋಕರ್ಣದವರೇ ಎನ್ನಲಾಗಿದೆ. ©Copyright reserved by Vismaya tv ಗೋಕರ್ಣದ 86 ವರ್ಷದ ವೃದ್ಧೆ, ಗೋಕರ್ಣದ 80 ವರ್ಷದ ವೃದ್ಧೆ, ಗೋಕರ್ಣದ 77 ವರ್ಷದ ವೃದ್ಧೆಯಲ್ಲಿ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಮೂವರು ಕೂಡ ಈ ಹಿಂದೆ ಕರೋನಾ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಎನ್ನಲಾಗಿದೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button