Big News
Trending
Bhimanna Naik:ಶಿವರಾಮ ಹೆಬ್ಬಾರ್ ಮೊದಲು ಭಂಡ ರಾಜಕಾರಣ ಬಿಡಬೇಕು
ಶಾಸಕ ಭೀಮಣ್ಣ ನಾಯ್ಕ ವಾಗ್ದಾಳಿ
![sirsi mla Bhimanna Naik](http://i0.wp.com/vismaya24x7.com/wp-content/uploads/2023/08/Bhimanna-Naik.jpg?fit=1280%2C720&ssl=1)
ಶಿರಸಿ: ಯಾವ ಉದ್ದೇಶಕ್ಕಾಗಿ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂಬುದನ್ನು ಜನಸಾಮಾನ್ಯರಿಗೆ ಕಾರ್ಯಕರ್ತರಿಗೆ ತಿಳಿಸಿ ಬರಬೇಕು ಎಂದು ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ( Bhimanna Naik) ವಾಗ್ದಾಳಿ ನಡೆಸಿದರು. ಶನಿವಾರ ನಗರದಲ್ಲಿ ಹೇಳಿಕೆ ನೀಡಿರುವ ಭೀಮಣ್ಣ ನಾಯ್ಕ ( Bhimanna Naik) ಈ ಮೊದಲು ಅಧಿಕಾರಕ್ಕಾಗಿ ಹಣಕ್ಕಾಗಿ ಬಿಜೆಪಿ ಗೆ ಓಡಿ ಹೋದವರು ಇವರು.ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.ಅದಕ್ಕಾಗಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ.ಯಾವ ಕಾರಣಕ್ಕಾಗಿ ಬರುತ್ತಿದ್ದಾರೆ ಎಂಬುದನ್ನು ಜನಸಾಮಾನ್ಯರಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿ ಬರಬೇಕು .
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
ಅವರದ್ದೇ ಸರ್ಕಾರ ವಿದ್ದರೂ ಬನವಾಸಿ ಭಾಗದಲ್ಲಿ ನೀರಿನ ಯೋಜನೆ ಯನ್ನು ಮುಗಿಸಲು ಸಾಧ್ಯವಾಗಲಿಲ್ಲ.ಅಲ್ಲಿ ಮುಗಿತು ಈಗ ಇಲ್ಲಿಗೆ ಬರುತ್ತಿದ್ದಾರೆ. ಈ ತರಹದ ಬಂಡ ರಾಜಕಾರಣ ಮಾಡುವುದನ್ನು ಬಿಡಲಿ ಎಂದು ಶಿವರಾಮ ಹೆಬ್ಬಾರ ವಿರುದ್ಧ ವಾಗ್ದಾಳಿ ನಡೆಸಿದರು.
ವಿಸ್ಮಯ ನ್ಯೂಸ್, ಶಿರಸಿ