Big News
Trending

Bhimanna Naik:ಶಿವರಾಮ ಹೆಬ್ಬಾರ್ ಮೊದಲು ಭಂಡ ರಾಜಕಾರಣ ಬಿಡಬೇಕು

ಶಾಸಕ ಭೀಮಣ್ಣ ನಾಯ್ಕ ವಾಗ್ದಾಳಿ

ಶಿರಸಿ: ಯಾವ ಉದ್ದೇಶಕ್ಕಾಗಿ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂಬುದನ್ನು ಜನಸಾಮಾನ್ಯರಿಗೆ ಕಾರ್ಯಕರ್ತರಿಗೆ ತಿಳಿಸಿ ಬರಬೇಕು ಎಂದು ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ( Bhimanna Naik) ವಾಗ್ದಾಳಿ ನಡೆಸಿದರು. ಶನಿವಾರ ನಗರದಲ್ಲಿ ಹೇಳಿಕೆ ನೀಡಿರುವ ಭೀಮಣ್ಣ ನಾಯ್ಕ ( Bhimanna Naik) ಈ ಮೊದಲು ಅಧಿಕಾರಕ್ಕಾಗಿ ಹಣಕ್ಕಾಗಿ ಬಿಜೆಪಿ ಗೆ ಓಡಿ ಹೋದವರು ಇವರು.ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.ಅದಕ್ಕಾಗಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ.ಯಾವ ಕಾರಣಕ್ಕಾಗಿ ಬರುತ್ತಿದ್ದಾರೆ ಎಂಬುದನ್ನು ಜನಸಾಮಾನ್ಯರಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿ ಬರಬೇಕು .

ಅವರದ್ದೇ ಸರ್ಕಾರ ವಿದ್ದರೂ ಬನವಾಸಿ ಭಾಗದಲ್ಲಿ ನೀರಿನ ಯೋಜನೆ ಯನ್ನು ಮುಗಿಸಲು ಸಾಧ್ಯವಾಗಲಿಲ್ಲ.ಅಲ್ಲಿ ಮುಗಿತು ಈಗ ಇಲ್ಲಿಗೆ ಬರುತ್ತಿದ್ದಾರೆ. ಈ ತರಹದ ಬಂಡ ರಾಜಕಾರಣ ಮಾಡುವುದನ್ನು ಬಿಡಲಿ ಎಂದು ಶಿವರಾಮ ಹೆಬ್ಬಾರ ವಿರುದ್ಧ ವಾಗ್ದಾಳಿ ನಡೆಸಿದರು.

ವಿಸ್ಮಯ ನ್ಯೂಸ್, ಶಿರಸಿ

Back to top button