![](http://i0.wp.com/vismaya24x7.com/wp-content/uploads/2020/07/uttara-kannada-9.png?fit=630%2C342&ssl=1)
69 ಮಂದಿ ಗುಣಮುಖರಾಗಿ ಬಿಡುಗಡೆ
111 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 75 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಹಳಿಯಾಳದಲ್ಲಿ ಅತಿಹೆಚ್ಚು ಅಂದರೆ 30 ಕೇಸ್ ದಾಖಲಾಗಿದೆ. ಉಳಿದಂತೆ ಶಿರಸಿ 16, ಮುಂಡಗೋಡ 9, ಕಾರವಾರದಲ್ಲಿ 5, ಭಟ್ಕಳ 5, ಸಿದ್ದಾಪುರ 4, ಜೋಯಿಡಾ 3, ಕುಮಟಾ, ಹೊನ್ನಾವರ, ಯಲ್ಲಾಪುರದಲ್ಲಿ ತಲಾ ಒಂದೊಂದು ಪ್ರಕರಣ ದೃಢಪಟ್ಟಿದೆ.
ಇದೇ ವೇಳೆ, 69 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳದ 33, ಕುಮಟಾದ 20, ಕಾರವಾರದಲ್ಲಿ 4, ಮುಂಡಗೋಡಿನ 6, ಹೊನ್ನಾವರದ 1, ಭಟ್ಕಳದ ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2910ಕ್ಕೆ ಏರಿಕೆಯಾಗಿದೆ. 888 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊನ್ನಾವರದಲ್ಲಿ ಒಂದು ಕರೊನಾ ಕೇಸ್ ದಾಖಲು?
ಹೊನ್ನಾವರ: ಇಂದು ಒಂದು ಕರೊನಾ ಕೇಸ್ ದೃಢಪಟ್ಟಿದೆ. ಹೊನ್ನಾವರ ತಾಲ್ಲೂಕಿನ ಚಂದಾವರದ 11 ತಿಂಗಳ ಮಗುವಿಗೆ ಪಾಸಿಟಿವ್ ಬಂದಿದೆ. ಮಗುವಿಗೆ ಅನಾರೋಗ್ಯ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಕುಮಟಾದ ಆಸ್ಪತ್ರೆಗೆ ತೆರಳಿದ ಸಂದರ್ಭದಲ್ಲಿ ಕರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದಾಗಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 190 ಕ್ಕೆ ಏರಿಕೆಯಾದಂತಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
![](http://i0.wp.com/vismaya24x7.com/wp-content/uploads/2020/08/today-list.jpeg?resize=708%2C324&ssl=1)