Shivaram Hebbar Speech: ನಾನು ಜ್ಯೋತಿಷ ಅಲ್ಲ! ಹೆಬ್ಬಾರ್ ಮಾತಿನ ಹಿಂದಿನ ಮರ್ಮವೇನು?

ಮುಂಡಗೋಡ: ನಾನು ಇಲ್ಲಿಯವರೆಗೂ ಬಿಜೆಪಿ ಶಾಸಕನಾಗಿದ್ದೇನೆ. ಆದರೆ, ಮುಂದೇ ಏನಾಗುತ್ತದೆ ಎಂದು ಹೇಳಲು, ನಾನು ಜ್ಯೋತಿಷಿ ಅಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಮುಂದಿನ ತಿಂಗಳು ಕಾಂಗ್ರೆಸ್ ಸೇರ್ಪಡೆ ಆಗುತ್ತೀರಿ ಎಂಬ ವದಂತಿ ಎಲ್ಲೆಡೆ ಹರಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು.

ಇದೇ ವೇಳೆ ಮಾತು ಮುಂದುವರಿಸಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯ ಉದ್ದೇಶದಿಂದ ಭೇಟಿ ಮಾಡಿಲ್ಲ. ನನ್ನ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಮಳೆ ಕಡಿಮೆಯಾಗಿ ಬರದ ಛಾಯೆ ಆವರಿಸಿದೆ. ಹೀಗಾಗಿ ಕ್ಷೇತ್ರದ ಜನರ ಹಿತದೃಷ್ಟಿಯಿಂದ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ನನ್ನ ಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಎಂದು ಮನವಿ ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version