ಮಾಹಿತಿ
Trending

ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಸನ್ನಿಧಿ ಹೆಗಡೆಗೆ ಶ್ರೀ ದೇವಸ್ಥಾನದಿಂದ ಸನ್ಮಾನ

ಶಿರಸಿ : 2019-2020 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶ್ರೀಮಾರಿಕಾಂಬಾ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ನೂರಕ್ಕೆ ನೂರು ಅಂಕ ಗಳಿಸುವುದರೊಂದಿಗೆ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಈ ಹಿನ್ನೆಲೆಯಲ್ಲಿ ಶ್ರೀ ಮಾರಿಕಾಂಬಾ ದೇವಾಲಯದಿಂದ ಶ್ರೀ ದೇವಿಯ ಅನುಗ್ರಹಯುಕ್ತ ಪ್ರಸಾದದೊಂದಿಗೆ ಶಾಲು ಹೊದಿಸಿ ಗೌರವಿಸಲಾಯಿತು ಮತ್ತು ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಕೀರ್ತಿ ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದರು.

ಈ ಸಮಯದಲ್ಲಿ ದೇವಾಲಯದ ಅಧ್ಯಕ್ಷ ಡಾ. ವೆಂಕಟೇಶ.ಎಲ್.ನಾಯ್ಕ , ಉಪಾಧ್ಯಕ್ಷರಾದ ಮನೋಹರ ಮಲ್ಮನೆ,ಧರ್ಮದರ್ಶಿಗಳಾದ ಲಕ್ಷ್ಮಣ. ಎಮ್. ಕಾನಡೆ ಮತ್ತು ಶಶಿಕಲಾ. ಜಿ. ಚಂದ್ರಾಪಟ್ಟಣ ಮತ್ತು ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಶಿರಸಿ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button