ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ: ತಂದೆ ದಾಖಲಿಸಿದ ದೂರಿನಲ್ಲಿ ಏನಿದೆ?

ಭಟ್ಕಳ: ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದ ಕೊಡಮಕ್ಕಿ, ಹಾಡವಳ್ಳಿಯಲಿ ನಡೆದಿದೆ. ಮೃತ ಯುವತಿ, ನೇತ್ರಾ ಮುತ್ತಯ್ಯ ಗೋವಾಳಿ ಎಂದು ತಿಳಿದು ಬಂದಿದೆ. ಈಕೆ ವಕೀಲರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.

Jobs: ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ಕೂಡಲೇ ಸಂಪರ್ಕಿಸಿ

ಈಕೆಗೆ ಆರೋಪಿಯಾದ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ ನಂತರ ಗೆಳೆತನ ಮಾಡಿಕೊಂಡಿದ್ದ. ತಾನು ಖರ್ಚು ಮಾಡಿದ ಹಣ ಕೊಡುವಂತೆ ಹೇಳಿ ಕರೆ ಮಾಡಿ ಹೆದರಿಸಿ ಹಿಂಸೆ ನೀಡಿ, ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ನಿನ್ನ ಮಾನ ಮರ್ಯಾದೆ ತೆಗೆಯುತ್ತೇನೆ ಎಂದು ಪ್ರಚೋದಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಯುವತಿ ತನ್ನ ಹಳೆಯ ಮನೆಯಲ್ಲಿ ಕುತ್ತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆರೋಪಿ ಗೋವರ್ಧನ ಮೊಗೇರ ತನ್ನ ಮಗಳ ಸಾವಿಗೆ ಕಾರಣ ಎಂದು ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ಯುವತಿಯ ತಂದೆ ಮುತ್ತಯ್ಯ ಗೋವಾಳಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿ.ಎಸ್.ಐ ಶ್ರೀಧರ ನಾಯ್ಕ ಮೃತ ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಆರೋಪಿಗೆ ಕಠಿಣ ಶಿಕ್ಷೆ ಯಾಗಬೇಕೆಂದು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version