Follow Us On

Google News
Important
Trending

ರಸ್ತೆ ದಾಟುತ್ತಿದ್ದ ಅಪರಿಚಿತನಿಗೆ ಕಾರು ಡಿಕ್ಕಿ: ವ್ಯಕ್ತಿ ಸ್ಥಳದಲ್ಲಿಯೇ ಸಾವು

ಭಟ್ಕಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಕಾರೊಂದು ಡಿಕ್ಕಿಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಸುಮಾರು 55-60 ವರ್ಷದವ ಎಂದು ತಿಳಿದುಬಂದಿದೆ. ಹೊನ್ನಾವರ ಕಡೆಯಿಂದ ಭಟ್ಕಳದ ಕಡೆಗೆ ಅತಿ ವೇಗ ಹಾಗೂ ಅಜಾಗರುಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕಾರಿನ ಚಾಲಕ ಮುರ್ಡೇಶ್ವರದ ರೈಲ್ವೆ ನಿಲ್ದಾಣದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ- ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ವ್ಯಕ್ತಿ ತಲೆಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button