Big News

ಒಂದೇ ದಿನದಲ್ಲಿ ಸುಮಾರು 126 ಕಡತ ವಿಲೇವಾರಿ: ಗಮನಸೆಳೆದ ಜಿಲ್ಲಾಧಿಕಾರಿಗಳು

ನಿಗದಿತ ಕಾಲಾವಧಿಯೊಳಗೆ ಕಡತ ವಿಲೇವಾರಿ ಮಾಡದಿದ್ರೆ ಕ್ರಮಕೈಗೊಳ್ಳುವ ಎಚ್ಚರಿಕೆ

ಕಾರವಾರ: ಜಿಲ್ಲೆಯಲ್ಲಿ ಜನರು ಸರಕಾರದ ವಿವಿಧ ಸೌಲಭ್ಯಗಳನ್ನು ಕೋರಿ ಇಲಾಖೆಗಳಿಗೆ ಸಲ್ಲಿಸುವ ಅರ್ಜಿಗಳಿಗೆ ಸಂಬAಧಿಸಿದAತೆ ಕಡತಗಳನ್ನು ಅಧಿಕಾರಿಗಳು ನಿಗದಿತ ಕಾಲಾವಧಿಯೊಳಗೆ ವಿಲೇವಾರಿ ಮಾಡದೇ ಇದ್ದಲ್ಲಿ ಅಂತಹ ಅಧಿಕಾರಿಗಳ ವಿರುಧ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳಾದ ಗಂಗುಬಾಯಿ ಮಾನಕರ್ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಒಂದೇ ದಿನದಲ್ಲಿ ಸುಮಾರು 126 ಕಡತಗಳನ್ನು ವಿಲೇವಾರಿ ಮಾಡಿ ಗಮನ ಸೆಳೆದಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಸಮೀತಿ ಸಭೆಯಲ್ಲಿ ಮಂಡಿಸಲಾದ ಹಿಂದುಳಿದ ವರ್ಗಗಳ ಇಲಾಖೆಯ ಸಿಂಧುತ್ವ ಪ್ರಮಾಣ ಪತ್ರದ ಕಡತಗಳೂ ಸೇರಿದಂತೆ ವಿವಿಧ ಇಲಾಖೆಯ ಒಟ್ಟೂ 126 ಕಡತಗಳನ್ನು ವಿಲೇವಾರಿ ಮಾಡಿದ ನಂತರ ಮಾತನಾಡಿದ ಅವರು ಸಾರ್ವಜನಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಕಾಲದಲ್ಲಿ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳಬೇಕು. ಅನಗತ್ಯವಾಗಿ ಕಡತಗಳನ್ನು ವಿಳಬವಾಗಿ ವಿಲೇವಾರಿ ಮಾಡುವ ಅಧಿಕಾರಿಗಳ ವಿರುಧ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದಾರೆ.

ಎಲ್ಲಾ ಇಲಾಖೆಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಪೂರಕವಾದ ದಾಖಲೆಗಳು ಇಲ್ಲದಿದ್ದರೆ ಅರ್ಜಿದಾರರಿಗೆ ಮಾಹಿ ನೀಡಿ , ಅಗತ್ಯ ಪೂರಕ ದಾಖಲೆಗಳನ್ನು ಪಡೆದುಕೊಂಡು ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ ಎಲ್ಲಾ ಇಲಾಖೆಗಳು ಜನಸ್ನೇಹಿಯಾಗಿ ಕಾರ್ಯವನ್ನು ನಿರ್ವಹಿಸಬೇಕು ಎಂದರು.

ದುರುದ್ದೇಶಪೂರಕವಾಗಿ ಕಡತಗಳ ವಿಲೇವಾರಿಗೆ ವಿಳಂಬ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ವಿವಿಧ ಇಲಾಕೆಗಳಿಂದ ತಮಗೆ ಸಲ್ಲಿಕೆಯಾಗುವ ಕಡತಗಳಿದ್ದಲ್ಲಿ ಅವುಗಳಿಗೆ ಯಾವುದೇ ಸಂದರ್ಭದಲ್ಲಿ ವಿಳಂಬಕ್ಕೆ ಆಸ್ಪದ ನೀಡದೇ ಅಧಿಕಾರಿಗಳು ತಮ್ಮನ್ನು ನೇರವಾಗಿ ಭೇಟಿಯಾಗಿ ಕಡತಗಳಿಗೆ ಅನುಮೋದನೆ ಪಡೆಯುವಂತೆ ತಿಳಿಸಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್….

Back to top button