Follow Us On

Google News
Important
Trending

ರಸ್ತೆ ದಾಟುತ್ತಿದ್ದಾಗ ಡಿಕ್ಕಿ ಹೊಡೆದ ಆಟೋ: ವ್ಯಕ್ತಿ ಸಾವು

ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ರಂಗಿನಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮುಹಮ್ಮದ್ ಅಶ್ರಫ್ ಇಬ್ನ್ ಅಬ್ದುಲ್ ರಶೀದ್ ಖಾನ್ (60) ಎಂದು ಗುರುತಿಸಲಾಗಿದೆ. ಮುಹಮ್ಮದ್ ಅಶ್ರಫ್ ಅವರು ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ತನ್ನ ಮನೆಗೆ ಹೋಗಲು ಹೆದ್ದಾರಿ ದಾಟುತ್ತಿದ್ದಾಗ ಆಟೋ ಡಿಕ್ಕಿ ಹೊಡೆದಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ ಅವರನ್ನು ಸ್ಥಳೀಯರು ಭಟ್ಕಳ ಸರಕಾರಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿದರು. ಆದರೆ, ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಕಂದಾಪುರ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button