Important
Trending

ಆಹಾರ ಅರಸಿ ಬಂದು ಬಾವಿಯಲ್ಲಿ ಬಿದ್ದು ಚಿರತೆ ಸಾವು

ಶಿರಸಿ: ಬಾವಿಯಲ್ಲಿ ಚಿರತೆಯೊಂದು ಬಿದ್ದು ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ಬಿಕ್ನಳ್ಳಿಯಲ್ಲಿ ನಡೆದಿದೆ. ಹೌದು, ಶಿರಸಿ ವಲಯದ ಉಂಚಳ್ಳಿ ಬಿಕ್ನಳ್ಳಿ ಗ್ರಾಮದ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಒಂದುವರೆ ವರ್ಷದ ಹೆಣ್ಣು ಚಿರತೆ ಆಹುತಿಯಾಗಿದೆ. ಆಹಾರ ಅರಿಸಿ ಜನವಸತಿ ಪ್ರದೇಶಕ್ಕೆ ಬಂದು ಆಯತಪ್ಪಿ ಬಾವಿಗೆ ಬಿದ್ದಿರಬಹುದು ಎನ್ನಲಾಗಿದೆ. ಮುಂಜಾನೆ ನಸುಕಿನ ವೇಳೆ ಬಾವಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button