ಆಟವಾಡುತ್ತ ಆಕಸ್ಮಿಕವಾಗಿ ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು

ಕಾರವಾರ: ಮಗುವೊಂದು ಆಟವಾಡುತ್ತ ಆಕಸ್ಮಿಕವಾಗಿ ನೀರಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ಸಂಜೆ ನಡೆದಿದೆ. ಗ್ರಾಮದಲ್ಲಿ ಇಟ್ಟಿಗೆ ತಯಾರಿಸುವ ಕೆಲಸಕ್ಕೆ ಹೋಗುವಾಗ ತಾಯಿ ತನ್ನ 3 ವರ್ಷದ ಮಗುವನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿದ್ದಳು. ಈ ವೇಳೆ ತಾಯಿ ಇಟ್ಟಿಗೆ ತಯಾರಿಸುವ ಕೆಲಸದಲ್ಲಿ ಇದ್ದ ವೇಳೆ, ಆಟವಾಡುತ್ತಿದ್ದ ಮಗು ನೀರು ಸಂಗ್ರಹಿಸಿಟ್ಟ ತೊಟ್ಟಿಯಲ್ಲಿ ಬಿದ್ದಿದೆ.

ಇಂದೂರ ಗ್ರಾಮದ ಮಾನ್ವಿತ ಮಲ್ಲಿಕಾರ್ಜುನ್ ಹೊಸೂರ(3) ಮೃತಪಟ್ಟ ಬಾಲಕಿ ಎಂದು ತಿಳಿದುಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿ ಕಿಮ್ಸ್ ಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಸ್ಮುಯ ನ್ಯೂಸ್, ಯಲ್ಲಾಪುರ

Exit mobile version