Important
Trending

ಸಂಶಯ ತಂದ ಆಪತ್ತು: ಪತ್ನಿಯ ಕೊಲೆ ಮಾಡಿದ ಪತಿ

ಭಟ್ಕಳ: ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮುರುಡೇಶ್ವರ ಮಾವಳ್ಳಿ-1 ರ ಜನತಾ ಕಾಲೊನಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ, ಕೃಶಿದಾ ಬಾನು ಎಂದು ತಿಳಿದು ಬಂದಿದೆ. ಈಕೆಗೆ ಕಳೆದ 15 ವರ್ಷದ ಹಿಂದೆ ಹುಬ್ಬಳ್ಳಿ ಮೂಲದ ಆರೋಪಿ ರಶೀದ ಬೇಪಾರಿ ಎನ್ನುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದರು.

ಆದರೆ ಆರೋಪಿ ಕಳೆದ ಹಲವು ತಿಂಗಳಿನಿoದ ತನ್ನ ಹೆಂಡತಿಯ ಮೇಲೆ ಸಂಶಯ ಪಟ್ಟು ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ. ಇದರಿಂದ ಆಕೆ ಗಂಡನ ಮನೆ ಬಿಟ್ಟು ಮಾವಳ್ಳಿ 1 ಗ್ರಾಮದ ಜನತಾ ಕಾಲೋನಿಯಲ್ಲಿರುವ ತನ್ನ ಸಹೋದರನ ಮನೆಯಲ್ಲಿ ಗಂಡನೊoದಿಗೆ ವಾಸವಾಗಿದ್ದಳು. ಆದರೂ ಕೂಡ ಆರೋಪಿ ತನ್ನ ಹೆಂಡತಿಯ ಮೇಲೆ ಸಂಶಯಪಟ್ಟು ಅಲ್ಲಿಯೂ ಕೂಡ ಆಕೆ ಮೇಲೆ ಹಲ್ಲೆ ಮಾಡಿದ್ದ. ಇದೀಗ ಪತ್ನಿಯನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button