Big News
Trending

Anjali Nimbalkar: ಬಿಜೆಪಿಗು ಬರೀ ಸುಳ್ಳು ಹೇಳುತ್ತಿದ್ದಾರೆ: ಅಂಜಲಿ ನಿಂಬಾಳ್ಕರ್

ಜೋಯ್ಡಾ: 2014ರಿಂದ ಬಿಜೆಪಿಗರು ಹೇಳುತ್ತಿದ್ದಾರೆ, ಖಾತೆಗೆ 15 ಲಕ್ಷ ಹಾಕುತ್ತೇವೆಂದು. ಅದಕ್ಕಾಗಿ ಝೀರೋ ಖಾತೆ ಮಾಡಿಸಿದರು. ಎಲ್ಲಾದರೂ ಓರ್ವ ಬಿಜೆಪಿಗನ ಖಾತೆಗೆ ಹಣ ಬಂದಿದ್ದರೆ ಹೇಳಿ, ನಾವೆಲ್ಲರೂ ರಾಜೀನಾಮೆ ಕೊಡುತ್ತೇವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ( Anjali Nimbalkar) ಸವಾಲೆಸೆದರು.

ಜೊಯಿಡಾದ ಗಣೇಶಗುಡಿಯಲ್ಲಿ ಹಮ್ಮಿಕೊಂಡಿದ್ದ ಉತ್ತರಕನ್ನಡ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಿಜೆಪಿಗರಂತೆ ಸುಳ್ಳು ಹೇಳಲ್ಲ; ಯಾವ ಪಕ್ಷ, ಜಾತಿ ಭೇದ ನೋಡದೆ ಐದೂ ಗ್ಯಾರಂಟಿಯನ್ನ ಮುಟ್ಟಿಸಿದ್ದೇವೆ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ.ದೇಶಪಾಂಡೆ ಮಾತನಾಡಿ, ಜೊಯಿಡಾದಲ್ಲಿ ಕುಣಬಿ ಸಮಾಜದವರ ಸಂಖ್ಯೆ ಹೆಚ್ಚಿದೆ. ಗೋವಾ ಕುಣಬಿಗಳು ಪರಶಿಷ್ಟ ಪಂಗಡದಲ್ಲಿದ್ದಾರೆ. ಜೊಯಿಡಾದ ಕುಣಬಿಗಳೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಎಲ್ಲಾ ಕ್ಷೇತ್ರದಿಂದಲೂ ಹಿಂದುಳಿದಿದ್ದಾರೆ. ಹೀಗಾಗಿ ಇಲ್ಲಿಯ ಕುಣಬಿಗಳನ್ನೂ ಪ.ಪಂಗಡಕ್ಕೆ ಸೇರಿಸಬೇಕಂಬ ಪ್ರಯತ್ನಗಳು ನಡೆದಿವೆ. ಆದರೆ ಈ ಪ್ರಕ್ರಿಯೆ ಅಂತಿಮ ಹಂತದಲ್ಲಿ ಭಾರತ ಸರ್ಕಾರದಲ್ಲಿದೆ. ಕಾಂಗ್ರೆಸ್ ಬಡವರ, ಕೂಲಿಕಾರರ ಪಕ್ಷ. ಕುಣಬಿಗಳ ಅಭ್ಯುದಯಕ್ಕಾಗಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಬಿಜೆಪಿಗರು 30 ವರ್ಷಗಳಿಂದ ಸುಳ್ಳು ಹೇಳುತ್ತಾ, ಭ್ರಷ್ಟಾಚಾರ ಮಾಡುತ್ತಾ ಅಧಿಕಾರ ಮಾಡಿದರು. ಅವರ ಸುಳ್ಳು ಈಗ ಜನರಿಗೆ ಗೊತ್ತಾಗಿದೆ. ಸುಳ್ಳು ಬಿಟ್ಟರೆ ಅವರು ಬೇರೇನೂ ಮಾಡಿಲ್ಲ. ಬಿಜೆಪಿ ಪಕ್ಷದಿಂದ ಸಾಮಾನ್ಯಜನರಿಗೆ ಒಂದೇ ಒಂದು ಪ್ರಯೋಜನಕಾರಿ ಕೆಲಸ ಆಗಿಲ್ಲ. ಕಾಂಗ್ರೆಸ್ ನುಡಿದಂತೆ ನಡೆದಿದೆ; ಗ್ಯಾರಂಟಿಯನ್ನ ಜನರಿಗೆ ತಲುಪಿಸಿದೆ. ಬಿಜೆಪಿಗರು ಚುನಾವಣೆಗಾಗಿ ಮತ್ತೆ ಸುಳ್ಳು ಹೇಳಿಕೊಂಡು ಬರುತ್ತಾರೆ. ಜನ ಅವರನ್ನ ನಂಬಬಾರದು.

ನಾವೆಲ್ಲರೂ ಸೇರಿ ಈ ಬಾರಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನ ಸಂಸತ್ ಗೆ ಕಳುಹಿಸೋಣ. ಅರಣ್ಯ ಅತಿಕ್ರಮಣಕ್ಕೆ ಸಂಬoಧಿಸಿದoತೆ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲು ಸಂಸತ್ ನಲ್ಲಿ ಅಗತ್ಯ ತಿದ್ದುಪಡಿಗೆ ಅವರು ಶ್ರಮಿಸಲಿದ್ದಾರೆ. ಅರಣ್ಯ ಅತಿಕ್ರಮಣ ಸಕ್ರಮಾತಿ ಕೂಡ ನಮ್ಮ ಮತ್ತೊಂದು ಗ್ಯಾರಂಟಿ ಎಂದು ಘೋಷಿಸಿದರು.

ವಿಸ್ಮಯ ನ್ಯೂಸ್, ಜೋಯ್ಡಾ

Back to top button