ಮನೆಯ ಸಮೀಪ ಬಂದು ನಾಯಿಯನ್ನು ಹೊತ್ತೊಯ್ದ ಚಿರತೆ: ಸಿಸಿಟಿವಿಯಲ್ಲಿ ಸೆರೆಯಾಗಿದೆ ದೃಶ್ಯ

ಹೊನ್ನಾವರ: ತಾಲೂಕಿನ ಹಳದೀಪುರದ ಕುದಬೈಲ್ ಸಮೀಪ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಕುದಬೈಲ್ ನಿವಾಸಿಗಳಾದ ರಮೇಶ ಮಂಜುನಾಥ ನಾಯ್ಕ ಎನ್ನುವವರ ಮನೆಯ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ರಾತ್ರಿ 12 ಗಂಟೆಯ ಸುಮಾರಿಗೆ ಚಿರತೆಯು ಮನೆಯ ಹತ್ತಿರ ಬಂದು ನಾಯಿಯನ್ನು ಎಳೆದೊಯ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಿಂದಾಗಿ ಮನೆಯವರು ಮಾತ್ರವಲ್ಲದೇ ಅಕ್ಕ ಪಕ್ಕದ ಮನೆಯವರು ಹಾಗೂ ಕುದಬೈಲ್ ಸಮೀಪದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಅರಣ್ಯ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version