ಭೀಕರ ರಸ್ತೆ ಅಪಘಾತ: ಪಾದಚಾರಿ ಸ್ಥಳದಲ್ಲೇ ಸಾವು

ಶಿರಸಿ: ಇಲ್ಲಿನ ಕೆರೆಗುಂಡಿ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಪಾದಚಾರಿ ಮೃತಪಟ್ಟಿದ್ದಾನೆ. ಬಚಗಾಂವ್ ಗ್ರಾಮದ ವೆಂಕಟೇಶ ಮಡಿವಾಳ ಮೃತಪಟ್ಟ ಪಾದಚಾರಿ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಬೈಕ್ ಸವಾರ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕುಮಟಾ: ತಾಲೂಕಿನ ಮಿರ್ಜಾನ್ ಖೈರೆ ಸಮೀಪ ಟಿಪ್ಪರ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಿರ್ಜಾನ್ ಮಾರ್ಗವಾಗಿ ಕುಮಟಾ ಕಡೆ ಸಾಗುತ್ತಿದ್ದ ಟಿಪ್ಪರ್‌ಗೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಟೂರಿಸ್ಟ್ ಇನ್ನೊವಾ ಕಾರ್ ಹಿಂಬದಿಯಿoದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲವಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ

Exit mobile version