Uttara Kannada
Trending

ಉತ್ತರಕನ್ನಡದಲ್ಲಿ ಇಂದು 139 ಕೇಸ್

ಹಳಿಯಾಳದಲ್ಲಿ ಓರ್ವ ಸಾವು
38 ಮಂದಿ ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರ 139 ಕರೊನಾ ಪ್ರಕರಣ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಕಾರವಾರದಲ್ಲಿ 40, ಕುಮಟಾದಲ್ಲಿ 16, ಯಲ್ಲಾಪುರದಲ್ಲಿ 43, ಅಂಕೋಲಾದಲ್ಲಿ 4, ಹೊನ್ನಾವರದಲ್ಲಿ 5, ಭಟ್ಕಳದಲ್ಲಿ 3, ಶಿರಸಿಯಲ್ಲಿ 3, ಹಳಿಯಾಳದಲ್ಲಿ 22, ಮುಂಡಗೋಡಿನಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿಂದು ಒಂದು ಸಾವು:

ಇದೇ ವೇಳೆ, 48 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹಳಿಯಾಳದಲ್ಲಿ 5, ಅಂಕೋಲಾದಲ್ಲಿ 4, ಕಾರವಾರದಲ್ಲಿ 16, ಕುಮಟಾದಲ್ಲಿ 5, ಹೊನ್ನಾವರದಲ್ಲಿ 1, ಭಟ್ಕಳದಲ್ಲಿ 7, ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೊಂದೆಡೆ, ಜಿಲ್ಲೆಯ ಹಳಿಯಾಳದಲ್ಲಿ ಕರೊನಾ ಸೊಂಕಿಗೆ ಓರ್ವ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 45ಕ್ಕೆ ಏರಿಕೆಯಾಗಿದೆ.

ಭಟ್ಕಳ ತಾ.ಪಂ. ಅಧ್ಯಕ್ಷರಿಗೆ ಸೋಂಕು ದೃಢ:

ಭಟ್ಕಳ: ಭಟ್ಕಳದ ತಾಲೂಕ ಪಂಚಾಯತ ಅಧ್ಯಕ್ಷರಾದ ಈಶ್ವರ ನಾಯ್ಕ ಅವರಿಗೆ ಬುಧವಾರದಂದು ಕರೊನಾ ಸೋಂಕು ಧೃಡಪಟ್ಟಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇಂದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ಕರೊನಾ ಸೋಂಕು ಧೃಡಪಟ್ಟಿದ್ದು, ಇವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನ್ನ ಸಂಪರ್ಕಕ್ಕೆ ಬಂದವರು ಸರ್ಕಾರಿ ಆಸ್ಪತ್ರೆ ಅಥವಾ ಪಕ್ಕದ ಯಾವುದೇ ಆರೋಗ್ಯ ಘಟಕಕ್ಕೆ ಭೇಟಿ ನೀಡಿ ಕರೊನಾ ಪರೀಕ್ಷೆಯನ್ನು ಮಾಡಿಕೊಳ್ಳಬೇಕಾಗಿ ಅವರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568

Back to top button