![](http://i0.wp.com/vismaya24x7.com/wp-content/uploads/2020/08/1-2.jpg?fit=640%2C427&ssl=1)
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,517ಕ್ಕೆ ಏರಿಕೆ
111 ಮಂದಿ ಗುಣಮುಖರಾಗಿ ಬಿಡುಗಡೆ
ಸಾವಿನ ಸಂಖ್ಯೆ 48ಕ್ಕೆ ಏರಿಕೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಕರೊನಾ ಪ್ರಕರಣ ದಾಖಲಾಗಿದೆ. ಅಂಕೋಲಾದಲ್ಲಿ 14, ಕುಮಟಾದಲ್ಲಿ 18, ಕಾರವಾರದಲ್ಲಿ 12, ಹೊನ್ನಾವರದಲ್ಲಿ 18, ಸಿದ್ದಾಪುರದಲ್ಲಿ 13, ಯಲ್ಲಾಪುರದಲ್ಲಿ 12, ಜೊಯಿಡಾದಲ್ಲಿ 11 , ಭಟ್ಕಳದಲ್ಲಿ 22, ಶಿರಸಿಯಲ್ಲಿ 16, ಹಳಿಯಾಳದಲ್ಲಿ 57 , ಮುಂಡಗೋಡಿನಲ್ಲಿ ಐವರಿಗೆ ಸೋಂಕು ದೃಢಪಟ್ಟಿದೆ.
ಇದೇ ವೇಳೆ, ಜಿಲ್ಲೆಯಾದ್ಯಂತ ವಿವಿಧ ಆಸ್ಪತ್ರೆಯಿಂದ 111 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊನ್ನಾವರದಲ್ಲಿ 1, ಶಿರಸಿಯಲ್ಲಿ 34, ಕಾರವಾರದಲ್ಲಿ 30, ಸಿದ್ದಾಪುರದಲ್ಲಿ 15, ಹಳಿಯಾಳದಲ್ಲಿ 25 , ಅಂಕೋಲಾದಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು 198 ಪ್ರಕರಣ ದೃಢಪಟ್ಟ ಬೆನ್ನಲ್ಲೆ, ಜಿಲ್ಲೆಯ ಸೋಂಕಿತರ ಸಂಖ್ಯೆ 4,517ಕ್ಕೆ ಏರಿಕೆಯಾಗಿದೆ. 3,346 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿಂದು ಮೂವರ ಸಾವು:
ಹಳಿಯಾಳ ಹಾಗೂ ಮುಂಡಗೋಡ, ಕಾರವಾರದಲ್ಲಿ ತಲಾ ಓರ್ವ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 48ಕ್ಕೆ ಏರಿಕೆಯಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
- ಅಂಕೋಲಾ ದುರಂತ: ಸ್ಥಳೀಯ ಮೀನುಗಾರರ ಸಹಕಾರದಲ್ಲಿ, ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆ
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ