
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,517ಕ್ಕೆ ಏರಿಕೆ
111 ಮಂದಿ ಗುಣಮುಖರಾಗಿ ಬಿಡುಗಡೆ
ಸಾವಿನ ಸಂಖ್ಯೆ 48ಕ್ಕೆ ಏರಿಕೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಕರೊನಾ ಪ್ರಕರಣ ದಾಖಲಾಗಿದೆ. ಅಂಕೋಲಾದಲ್ಲಿ 14, ಕುಮಟಾದಲ್ಲಿ 18, ಕಾರವಾರದಲ್ಲಿ 12, ಹೊನ್ನಾವರದಲ್ಲಿ 18, ಸಿದ್ದಾಪುರದಲ್ಲಿ 13, ಯಲ್ಲಾಪುರದಲ್ಲಿ 12, ಜೊಯಿಡಾದಲ್ಲಿ 11 , ಭಟ್ಕಳದಲ್ಲಿ 22, ಶಿರಸಿಯಲ್ಲಿ 16, ಹಳಿಯಾಳದಲ್ಲಿ 57 , ಮುಂಡಗೋಡಿನಲ್ಲಿ ಐವರಿಗೆ ಸೋಂಕು ದೃಢಪಟ್ಟಿದೆ.
ಇದೇ ವೇಳೆ, ಜಿಲ್ಲೆಯಾದ್ಯಂತ ವಿವಿಧ ಆಸ್ಪತ್ರೆಯಿಂದ 111 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊನ್ನಾವರದಲ್ಲಿ 1, ಶಿರಸಿಯಲ್ಲಿ 34, ಕಾರವಾರದಲ್ಲಿ 30, ಸಿದ್ದಾಪುರದಲ್ಲಿ 15, ಹಳಿಯಾಳದಲ್ಲಿ 25 , ಅಂಕೋಲಾದಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು 198 ಪ್ರಕರಣ ದೃಢಪಟ್ಟ ಬೆನ್ನಲ್ಲೆ, ಜಿಲ್ಲೆಯ ಸೋಂಕಿತರ ಸಂಖ್ಯೆ 4,517ಕ್ಕೆ ಏರಿಕೆಯಾಗಿದೆ. 3,346 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿಂದು ಮೂವರ ಸಾವು:
ಹಳಿಯಾಳ ಹಾಗೂ ಮುಂಡಗೋಡ, ಕಾರವಾರದಲ್ಲಿ ತಲಾ ಓರ್ವ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 48ಕ್ಕೆ ಏರಿಕೆಯಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
- ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ
- ಆಕ್ಸಿಸ್ ಬ್ಯಾಂಕ್ನಲ್ಲಿ ಬೆಂಕಿ ಅನಾಹುತ: ಅಪಾರ ಹಾನಿ