Important
Trending

ಬಸ್, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊನ್ನಾವರ: ಬೈಕ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರದ ಅಗ್ರಹಾರ ಸಮೀಪದ ರಾಷ್ಟ್ರೀಯ ಹೆದ್ದಾರಿ ಸಮೀಪ ನಡೆದಿದೆ. ಅಂಸಳ್ಳಿಯ ಶಂಕರ್ ಭಟ್ ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ ಎಂದು ತಿಳಿದುಬಂದಿದೆ. ಹೊನ್ನಾವರದಿಂದ ಕುಮಟಾಕ್ಕೆ ತೆರಳುತ್ತಿದ್ದ ಬಸ್ ಮತ್ತು ಕುಮಟಾದಿಂದ ಹೊನ್ನಾವರಕ್ಕೆ ತೆರಳಿದ್ದ ಬೈಕ್ ಅಪಘಾತವಾದ ವೇಳೆ ಈ ದುರಂತ ಸಂಭವಿಸಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button