![](http://i0.wp.com/vismaya24x7.com/wp-content/uploads/2020/08/444.jpg?fit=640%2C363&ssl=1)
ಅಂಕೋಲಾ : ತಾಲೂಕಿನಲ್ಲಿ ಗುರುವಾರ 3 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಸೋಂಕಿನಿಂದ ಗುಣಮುಖರಾದ 5 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು ಒಟ್ಟೂ 60 ಸಕ್ರೀಯ ಪ್ರಕರಣಗಳಿವೆ. 65 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ. ಬೇಲೇಕೇರಿಯ ವ್ಯಕ್ತಿಯೋರ್ವರಲ್ಲಿ ಸೋಂಕಿನ ಲಕ್ಷಣಗಳು ದೃಢಪಟ್ಟಿದ್ದು, ಇವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದ ಮಗನ ಸಂಪರ್ಕದಿಂದ ಬಂದಿರುವ ಸಾಧ್ಯತೆ ಇದೆ. ಪಟ್ಟಣ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಇನ್ನೊಂದು ಪ್ರಕರಣ ಜ್ವರಲಕ್ಷಣಗಳಿಂದ ಕೂಡಿದ (ಐ.ಎಲ್.ಐ) ಮಾದರಿಯಾಗಿದೆ.
ಕರೊನಾ ವಾರಿಯರ್ಸ ವೈದ್ಯರಿಗೂ ಸೋಂಕು : ತಾಲೂಕಾ ಸರ್ಕಾರಿ ಆಸ್ಪತ್ರೆಯ ಪಿವರ್ ಕ್ಲಿನಿಕ್ನಲ್ಲಿ ಕರ್ತವ್ಯ ನಿರ್ವಹಿಸಿದ ವೈದ್ಯರೋರ್ವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಈ ಹಿಂದೆಯೂ ಕರೋನಾ ವಾರಿಯರ್ಸಗಳಾದ ಪೊಲೀಸ್ ಸಿಬ್ಬಂದಿ, ಗ್ರಾಮಪಂಚಾಯತ ಪಿ.ಡಿ.ಓ, ವೈದ್ಯ, ನರ್ಸ, ಡಿ ದರ್ಜೆ ನೌಕರರು, ಪುರಸಭೆಯ ಸ್ವಚ್ಛತಾ ಬಂಧು ಮತ್ತು ಇನ್ನೋರ್ವ ನೌಕರ ಸೇರಿದಂತೆ ಕೆಲವರಲ್ಲಿ ಕರೊನಾ ಪಾಸಿಟಿವ್ ಲಕ್ಷಣಗಳು ಕಂಡು ಬಂದಿತ್ತು.
ವಿವಿಧ ಸ್ತರದ ಕರೊನಾ ವಾರಿಯರ್ಸಗಳು ತಮ್ಮ ಜೀವದ ಅಪಾಯದ ಅರಿವಿದ್ದೂ, ಜನತೆಯ ಆರೋಗ್ಯ ಕಾಳಜಿಯಿಂದ ಕರ್ತವ್ಯ ಮತ್ತು ಸೇವೆ ನಿರ್ವಹಿಸುತ್ತಿರುವುದು ಶ್ಲಾಘನೀಯ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.
- ಅಂಕೋಲಾ ದುರಂತ: ಸ್ಥಳೀಯ ಮೀನುಗಾರರ ಸಹಕಾರದಲ್ಲಿ, ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆ
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ