ಮಳೆ ಅವಾಂತರ: ಗೋಡೆ ಕುಸಿದು ಮಹಿಳೆ ಸಾವು

ಕಾರವಾರ: ಸತತ ಮಳೆಯಿಂದಾಗಿ ನೆನೆದ ಹಳೆಯ ಕಟ್ಟಡದ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಅಸ್ನೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರವ ತೊರ್ಲೆಬಾಗ ಮಜರೆಯ ಗುಲಾಬಿ ರಾಮಚಂದ್ರ ಮಾಂಜ್ರೇಕರ (70) ಮೃತ ಮಹಿಳೆ ಎಂದು ತಿಳಿದುಬಂದಿದೆ. ಹಸುಗಳನ್ನು ಕಟ್ಟಿದ್ದ ತಮ್ಮ ಮನೆಯ ಪಕ್ಕದಲ್ಲಿದ್ದ ಹಳೆಯ ಕಟ್ಟಡದಲ್ಲಿ ಗಂಜಿ ಇಡಲು ತೆರಳಿದ್ದಾರೆ.

ಇದನ್ನೂ ಓದಿ: ಬೃಹತ್ ನೇಮಕಾತಿ: 8 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ: SSLC ಆದವರು ಅರ್ಜಿ ಸಲ್ಲಿಸಿ

ಈ ವೇಳೆ ಮಳೆಗೆ ನೆನೆದ ಮಣ್ಣಿನ ಗೋಡೆ ಕುಸಿದಿದಿದ್ದು, ಕುಸಿದು ಬಿದ್ದ ಮಣ್ಣಿನ ಗೋಡೆಯೊಳಗೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದರು. ಹೀಗಾಗಿ ಮಹಿಳೆಯನ್ನು ಸ್ಥಳೀಯರು ಗಮನಿಸಲಿಲ್ಲ. ರಾತ್ರಿ ಸುರಿದ ಮಳೆಯಿಂದಾಗಿ ಗೋಡೆಯ ಮಣ್ಣು ತೊಳೆದು ಹೋಗಿದ್ದು, ಮಹಿಳೆಯ ದೇಹ ಹೊರಬಂದಿದೆ. ಬಳಿಕ ಸ್ಥಳೀಯರಿ ಗಮನಿಸಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version