ಮೊದಲನೇ ಮುನ್ನೆಚ್ಚರಿಕೆಯ ಸೂಚನಾ ಪತ್ರ: ಶರಾವತಿ ನದಿ ತೀರದ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ

ಕೆಪಿಸಿಎಲ್‌ನ ಮೊದಲನೇಯ ಮುನ್ನೆಚ್ಚರಿಕೆ ಪತ್ರದಲ್ಲಿ ಏನಿದೆ ನೋಡಿ?

ಹೊನ್ನಾವರ: ಲಿಂಗನಮಕ್ಕಿ ಜಲಾಶಯನ ಪ್ರದೇಶದಲ್ಲಿ ಸತತವಾಗಿ ಬೀಳುತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನದಿನೇ ಏರುತ್ತಿರುತ್ತದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಮಳೆ ಇಂದಿನ ಬೆಳಗ್ಗೆ 8.00 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.20 ಅಡಿಗಳಾಗಿರುತ್ತದೆ.

ಸುಮಾರು 60 ಸಾವಿರ ಕ್ಯೂಸೆಕ್ ಗಳಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಲಿಂಗನಮಕ್ಕಿ ಜಲಾಶಯದ ಹರಿದು ಬರುತ್ತಿದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಅಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಮೊದಲ ಮುನ್ನೆಚ್ಚರಿಕೆಯ ಪತ್ರವನ್ನು ಕೆಪಿಸಿಎಲ್ ಹೊರಡಿಸಿದೆ.

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟಲಿ ಆ ನೀರು ಗೇರುಸೋಪ್ಪಾ ಜಲಾಶಯಕ್ಕೆ ಹರಿದು ಬರುತ್ತದೆ. ಲಿಂಗನಮಕ್ಕಿ ಜಲಾಶದಿಂದ ಹರಿಬಿಟ್ಟ ಅಷ್ಟೆ ಪ್ರಮಾಣದ ನೀರನ್ನು ಗೇರುಸೋಪ್ಪಾ ಜಲಾಶಯದ ಹಿತ ದೃಷ್ಟಿಯಿಂದ ಹೊರಬಿಡಲಾಗುತ್ತದೆ. ಹೀಗಾಗಿ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆoದು ಮೊದಲ ಮುನ್ನೆಚ್ಚರಿಕೆಯ ಸೂಚನೆಯನ್ನು ನೀಡಿದೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Exit mobile version