ಕಾಲೇಜಿಗೆ ಎಂದು ಹೋದ ವಿದ್ಯಾರ್ಥಿ ನಾಪತ್ತೆ: ಈತನ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಶಿರಸಿ: ಕಾಲೇಜು ವಿದ್ಯಾರ್ಥಿಯೊಬ್ಬ ಕಾಣೆಯಾದ ಕುರಿತು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿ ತಾಲೂಕಿನ ಕಾನಗೋಡ ಗ್ರಾಮದ ಕಬ್ಬಳ್ಳಿಯ ಸಾತ್ವಿಕ್ ಮಂಜುನಾಥ ಹೆಗಡೆ ಕಾಣೆಯಾದ ವಿದ್ಯಾರ್ಥಿ ಎನ್ನಲಾಗಿದೆ. ಈತ ಈ ಹಿಂದೆ ವಿದ್ಯಾಭ್ಯಾಸ ಮಾಡುತ್ತಿದ್ದ ಶಿರಸಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೇಳಿ, ಜುಲೈ 26 ರಂದು ಬೆಳಿಗ್ಗೆ ಕಾರಿನ ಮೇಲೆ ಬಂದು ನಗರದ ಹಳೆ ಬಸ್ ನಿಲ್ದಾಣದ ಬಳಿ ಇಳಿದು ಹೋಗಿದ್ದಾನೆ.

ಆದರೆ, ಈತ ಕಾಲೇಜಿಗೂ ಹೋಗದೇ ಮರಳಿ ಮನೆಗೂ ಬಾರದೇ ಎಲ್ಲಿಯೋ ಕಾಣೆಯಾಗಿದ್ದಾನೆ ಎಂದು ತಂದೆ ಮಂಜುನಾಥ ಚಂದ್ರಶೇಖರ ಹೆಗಡೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಪತ್ತೆಯಾದ ವಿದ್ಯಾರ್ಥಿ ಕನ್ನಡ, ಇಂಗ್ಲೀಷ್, ಹಿಂದಿ ಭಾಷೆ ಮಾತನಾಡುತ್ತಾನೆ ಎನ್ನಲಾಗಿದ್ದು ಈತನ ಮಾಹಿತಿ ದೊರೆತಲ್ಲಿ ಶಿರಸಿ ನಗರ ಪೊಲೀಸ್ ಠಾಣೆ ಅಥವಾ ನಿಮ್ಮ ಹತ್ತಿರ ಪೊಲೀಸ್ ಠಾಣೆ ಸಂಪರ್ಕಿಸಿ ಮಾಹಿತಿ ನೀಡಲು ಕೋರಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version