Follow Us On

WhatsApp Group
Important
Trending

ಮಳೆಯ ಅಬ್ಬರ ಹಿನ್ನಲೆ: ಶಾಲಾ‌‌ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರಕನ್ನಡದಲ್ಲಿ ಮಳೆ ಮತ್ತೆ ಅಬ್ಬರಿಸುತ್ತಿದೆ. ಅಲ್ಲದೆ ಮತ್ತಷ್ಟು ಮಳೆಯಾಗುವ ಸಾದ್ಯತೆ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಆಗಸ್ಟ್ 1ರ ಗುರುವಾರದಂದು ಜಿಲ್ಲೆಯ ಐದು ತಾಲೂಕಿಗೆ ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ,ಪ್ರೌಡ ,ಪದವಿಪೂರ್ಮ,ಐಟಿಐ, ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು‌ ಮಾಹಿತಿ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button