Uttara Kannada
Trending

ಉತ್ತರ ಕನ್ನಡದಲ್ಲಿಂದು 106 ಕರೊನಾ ಕೇಸ್

ಜಿಲ್ಲೆಯಲ್ಲಿಂದು ಒಂದು ಸಾವು
79 ಮಂದಿ ಗುಣಮುಖರಾಗಿ ಬಿಡುಗಡೆ

[sliders_pack id=”1487″]

ಕಾರವಾರ: ಉತ್ತರಕನ್ನಡದಲ್ಲಿಂದು 106 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಕಾರವಾರದಲ್ಲಿ 11, ಅಂಕೋಲಾ 4, ಕುಮಟಾ 20, ಹೊನ್ನಾವರ 9, ಶಿರಸಿ 11, ಭಟ್ಕಳದಲ್ಲಿ 6, ಯಲ್ಲಾಪುರ 6, ಮುಂಡಗೋಡ 8 ಸೇರಿ ಒಟ್ಟು 106 ಕರೊನಾ ಪ್ರಕರಣ ದೃಢಪಟ್ಟಿದೆ. ಇಂದು 106 ಕರೊನಾ ಕೇಸ್ ದಾಖಲಾದ ಬೆನ್ನಲ್ಲೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,966ಕ್ಕೆ ಏರಿಕೆಯಾಗಿದೆ. 482 ಸೋಂಕಿತರಿಗೆ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿಂದು ಒಂದು ಸಾವು:

ಜಿಲ್ಲೆಯಾದ್ಯಂತ ಇಂದು ವಿವಿಧ ಆಸ್ಪತ್ರೆಯಿಂದ ಒಟ್ಟು 79 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 10, ಅಂಕೋಲಾ 16, ಕುಮಟಾ 2, ಹೊನ್ನಾವರ 3, ಭಟ್ಕಳ 23, ಶಿರಸಿ 5, ಹಳಿಯಾಳ 15, ಯಲ್ಲಾಪುರದಲ್ಲಿ ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ವೇಳೆ ಇಂದು ಭಟ್ಕಳದಲ್ಲಿ ಒಂದು ಸಾವಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಹೊನ್ನಾವರದಲ್ಲಿ 10 ಮಂದಿಗೆ ಕರೊನಾ ದೃಢ:

ಹೊನ್ನಾವರ: ತಾಲೂಕಿನಲ್ಲಿ ಇಂದು ಒಟ್ಟು 10 ಜನರಲ್ಲಿ ಸೋಂಕು ದೃಢಪಟ್ಟಿದೆ. ಪಟ್ಟಣದಲ್ಲಿ 5 ಪ್ರಕರಣ, ಕೆಕ್ಕಾರಿನಲ್ಲಿ 3, ಕಾವೂರ 1, ಕೆರವಳ್ಳಿ 1 ಒಂದು ಕೇಸ್ ದಾಖಲಾಗಿದೆ.

  • ಕೆಕ್ಕಾರಿನಲ್ಲಿ ಮೂರು ಪ್ರಕರಣ ದಾಖಲು
  • ತಾಲೂಕಾ ಆಸ್ಪತ್ರೆಯಲ್ಲಿ 15 ಸೋಂಕಿತರಿಗೆ ಚಿಕಿತ್ಸೆ

ಪಟ್ಟಣದ ಪ್ರಭಾತನಗರದ 52 ವರ್ಷದ ಮಹಿಳೆ ಮತ್ತು ಈಕೆಯ 12 ಮಗ, ಕೆಳಗಿನಪಾಳ್ಯದ 22 ವರ್ಷದ ಯುವಕ ಹಾಗೂ 24 ವರ್ಷದ ಯುವಕ, ಫಾರೆಸ್ಟ್ ಕಾಲೋನಿಯ 32 ವರ್ಷದ ಪುರುಷ, ಕೆಕ್ಕಾರದ 72 ವರ್ಷದ ಮಹಿಳೆ, 55 ವರ್ಷದ ಮಹಿಳೆ, 52 ವರ್ಷದ ಪುರುಷ, ಕಾವೂರಿನ 52 ವರ್ಷದ ಪುರುಷ, ಕೆರವಳ್ಳಿಯ 50 ವರ್ಷದ ಪುರುಷ ಸೇರಿದಂತೆ ಒಟ್ಟು 10 ಜನರಲ್ಲಿ ಪಾಸಿಟಿವ್ ಕಂಡುಬoದಿದೆ. ತಾಲೂಕಾ ಆಸ್ಪತ್ರೆಯಲ್ಲಿ 15 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button