Follow Us On

WhatsApp Group
Important
Trending

ಸ್ಕೂಟಿಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್: ಬೈಕ್ ಸವಾರ ಗಂಭೀರವಾಗಿ ಗಾಯ

ಕುಮಟಾ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಿರ್ಜಾನ ಬಳಿ ಕೋಟೆ ಕ್ರಾಸ್‌ನಲ್ಲಿ ನಡೆದಿದೆ. ಸ್ಕೂಟಿ ಸವಾರ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಮೂಡಂಗಿ ನಿವಾಸಿ ರವಿ ಪರಮೇಶ್ವರ ನಾಯ್ಕ ಎಂದು ತಿಳಿದು ಬಂದಿದೆ.

ಅಕೌಂಟೆಂಟ್, ಕ್ಯಾಶಿಯರ್, ಡ್ರೈವರ್‌ಗೆ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ: 10 ರಿಂದ 15 ಸಾವಿರ ವೇತನ

ಗೋಕರ್ಣಣದಿಂದ ಕುಮಟಾ ಕಡೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ರಾಷ್ಟ್ರೀಯ ಹೆದ್ದಾರಿ 66ರ ಮಿರ್ಜಾನ ಬಳಿ ಕೋಟೆಕ್ರಾಸ್ ಬಳಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ಬಳಿಕ ಗಾಯಾಳುವನ್ನು ಕುಮಟಾ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button