Follow Us On

WhatsApp Group
Important
Trending

ಬೇಟೆಯಾಡಲು ತೆರಳಿದ್ದ ವೇಳೆ ದಾಳಿ: ಓರ್ವನ ಬಂಧನ,‌ ಮೂವರು ಪರಾರಿ

ಸಿದ್ದಾಪುರ : ರಾತ್ರಿ ವೇಳೆಯಲ್ಲಿ ಅನಧಿಕೃತವಾಗಿ ಅರಣ್ಯ ಪ್ರವೇಶಿಸಿ ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಯತ್ನಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ  ನಾಲ್ವರು ಆರೋಪಿತ ಬೇಟೆಗಾರರಲ್ಲಿ ಓರ್ವ ನನ್ನ ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ವಾಹನ (ರಿಡ್ಜ್ ಕಾರು ) ಚಾಕು, ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಮಂಜುನಾಥ ಗಣಪತಿ ನಾಯ್ಕ ಪುರದ ಮಠ ಬಂಧಿತ ಆರೋಪಿಯಾಗಿದ್ದಾನೆ.

ಬಂಧಿತ ಆರೋಪಿಯನ್ನ ನ್ಯಾಯಕ್ಕೆ ಹಾಜರುಪಡಿಸಿದ್ದು ಉಳಿದ ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಶಾಖೆ ಹೆಗ್ಗೆಕೊಪ್ಪ ಕಲ್ಲೂರು ಗ್ರಾಮದ ಅರಣ್ಯ ಸರ್ವೆ ನಂಬರ್ 121 ರಲ್ಲಿ ರಾತ್ರಿ ವೇಳೆಯಲ್ಲಿ ಬೇಟೆಗಾರರು ಬೇಟೆಯಾಡೊಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್ ದಿವಾಕರ ಸಂಪಖಂಡ,‌‌ಸಿದ್ದಾಪುರ

Back to top button