ಮೀನು ಹಿಡಿಯಲು ಹೋಗಿದ್ದ ವೇಳೆ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಮಟಾ: ಮೀನು ಹಿಡಿಯಲು ಹೋಗಿದ್ದ ವೇಳೆ ನದಿಯಲ್ಲಿ ಮುಳುಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ. ಬರ್ಗಿ ಗ್ರಾಮ ಪಂಚಾಯತ ಸದಸ್ಯನಾಗಿದ್ದ ದಾವುದ್ ಅಲಿ ಘಾರಿಯಾ ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈತ ಬೆಟ್ಕುಳಿ ಸಮೀಪ ಅಘನಾಶಿನಿ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಅವಲಕ್ಕಿ ಮೇಲೆ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ವಿದ್ಯಾರ್ಥಿನಿ

ಇವರು ನಿರಂತರವಾಗಿ ಮೂರು ಬಾರಿ ಬರ್ಗಿ ಗ್ರಾಮ ಈ ಪಂಚಾಯತ್‌ಗೆ ಬೆಟ್ಕುಳಿ ವಾರ್ಡ್ನಿಂದ ಆಯ್ಕೆಯಾಗುತ್ತಾ ಬಂದಿದ್ದು, ಕಳೆದ ಅವಧಿಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಹ ಆಗಿದ್ದರು. ಹಾಲಿ ಬರ್ಗಿ ಗ್ರಾಮ ಪಂಚಾಯತ ಸದಸ್ಯನಾಗಿದ್ದರು. ಇನ್ನೂ ಕಾಂಗ್ರೆಸ್ ಸಂಘಟನೆಯಲ್ಲಿ ಸದಾ ಸಕ್ರಿಯಾವಾಗಿ ಇರುತ್ತಿದ್ದ ದಾವುದ್ ಆಕಸ್ಮಿಕ ಘಟನೆಯಲ್ಲಿ ಮೃತಪಟ್ಟಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version