ಅಡಿಕೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಸಿದ್ದಾಪುರ: ತಾಲೂಕಿನಲ್ಲಿ ಅಡಿಕೆ ಕಳ್ಳತನ ಮಾಡಿದ್ದ ಕಳ್ಳರನ್ನು ಸಿದ್ದಾಪುರ ಪೊಲೀಸರು ಬಂಧಿಸಿ ಕಳ್ಳತನವಾಗಿದ್ದ ಆಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದಿದ್ದಾರೆ. ಸೆಂಟ್ರಿoಗ್ ವೃತ್ತಿ ಮಾಡುತ್ತಿದ್ದ ಅಕ್ತರ ರಝಾ (20) ಬಿಳಗಿ ಮತ್ತು ಇಮ್ರಾನ್ ಶೇಖ್ ಆಲದಕಟ್ಟೆ ಇಟಗಿ ಎನ್ನುವ ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರಿoದ ಒಂದು ಲಕ್ಷದ ಇಪ್ಪತ್ತು ಸಾವಿರ ಮೌಲ್ಯದ 4 ಕ್ವಿಂಟಲ್ ಚಾಲಿ ಅಡಿಕೆ, ಕೃತ್ಯಕ್ಕೆ ಬಳಸಿದ ಕಾರು, ಬೈಕ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಕಳೆದ ಏಳು ವರ್ಷದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಮರಳಿ ಕುಟುಂಬ ಸೇರಿದ: ಭಾವುಕ ಕ್ಷಣ

ಸೆಪ್ಟೆಂಬರ್ 2 ರಂದು ತಾಲೂಕಿನ ಇಟಗಿ ಸಮೀಪದ ಆಲದಕಟ್ಟೆ ಬಳಿ ಬೈಕ್ ನಲ್ಲಿ ಬಂದ ಇಬ್ಬರು ನಾಲ್ಕು ಚೀಲ ಸಿಪ್ಪೆ ಅಡಿಕೆ ಕದ್ದುಕೊಂಡು ಹೋಗಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಸಿದ್ದಾಪುರ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕಳ್ಳರನ್ನ ಹಾಗೂ ಕಳ್ಳತನವಾದ ವಸ್ತುಗಳನ್ನು ಪತ್ತೆ ಹಚ್ಚಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Exit mobile version