ಕೆಲಸಕ್ಕೆ ಹೋದ ಯುವತಿ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಶಿರಸಿ: ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ನಾಪತ್ತೆಯಾದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಶಿರಸಿ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೀರಭದ್ರಗಲ್ಲಿಯ ಸುವರ್ಣಾ ವೆಂಕಟೇಶ ನಾಯ್ಕ ನಾಪತ್ತೆಯಾದ ಯುವತಿ.

ನೇಮಕಾತಿ: ನಬಾರ್ಡ್ ನಲ್ಲಿ 108 ಉದ್ಯೋಗಾವಕಾಶ: SSLC ಆದವರು ಅರ್ಜಿ ಸಲ್ಲಿಸಬಹುದು

ಈಕೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಪೆಟ್ರೋಲ್ ಬಂಕಿಗೆ ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವಳು ಪೆಟ್ರೋಲ್ ಬಂಕಿಗೆ ಕೆಲಸಕ್ಕೆ ಹೋಗದೇ ಮರಳಿ ಮನೆಗೂ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ ಎಂದು ಪತಿ ವೆಂಕಟೇಶ ಕೃಷ್ಣ ನಾಯ್ಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version