Follow Us On

WhatsApp Group
Big News
Trending

ಬಿಜೆಪಿಯಿಂದ ಸಂತೆ ಮಾರುಕಟ್ಟೆಯಲ್ಲಿ ಸದಸ್ಯತ್ವ ಅಭಿಯಾನ

ಭಟ್ಕಳ: ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಇವರ ಸಹಯೋಗದಲ್ಲಿ ಭಟ್ಕಳ ಸಂತೆ ಮಾರುಕಟ್ಟೆಯಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳ ಮಂಡಲದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ನಾಯ್ಕ ಇವರು ಈ ಸದಸ್ಯತ್ವ ಅಭಿಯಾನದ ಉದ್ದೇಶ ಬಿಜೆಪಿಗೆ ಹೆಚ್ಚು ಹೆಚ್ಚು ಸಾರ್ವಜನಿಕ ಬೆಂಬಲವನ್ನು ಹೆಚ್ಚಿಸುವುದು ಹಾಗೂ ಬಿಜೆಪಿಯು ರಾಷ್ಟ್ರ ನಿರ್ಮಾಣದ ಉತ್ಸಾಹದೊಂದಿಗೆ ದೇಶದ ಜನರನ್ನು ಸಂಪರ್ಕಿಸುವುದು ಹಾಗೂ ಸಂಘಟಿಸುವುದು. ಮತ್ತು 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃಧ್ಧಿ ಹೊಂದಿದ ದೇಶವನ್ನಾಗಿ ಮಾಡುವುದು.

ಕೆಲಸಕ್ಕೆ ಹೋದ ಯುವತಿ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಆದ್ದರಿಂದ ಪ್ರಜ್ಞಾವಂತ 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮಿಸ್ಸ್ಡ್ ಕಾಲ್ ಮಾಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಬಿಜೆಪಿಯ ಸದಸ್ಯರಾಗಿ ವಿಶ್ವದಲ್ಲಿಯೇ ಅತಿದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯನ್ನು ಬೆಂಬಲಿಸಬೇಕಾಗಿ ವಿನಂತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಾಡಿಗರ, ಶ್ರೀಕಾಂತ್ ನಾಯ್ಕ,ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶಿವಾನಿ ಶಾಂತಾರಾಮ್,ಮAಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ನಾಯ್ಕ, ಶ್ರೀಧರ ನಾಯ್ಕ, ಮುಂತಾದವರು ಇದ್ದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Back to top button