ಡಿವೈಡರ್ ಗೆ ಡಿಕ್ಕಿ ಹೊಡೆದ KSRTC ಬಸ್ : ಏಳು ಪ್ರಯಾಣಿಕರಿಗೆ ಗಾಯ

ಕುಮಟಾ: ಕೆ.ಎಸ್. ಆರ್.ಟಿ.ಸಿ. ಬಸ್ ಚಾಲಕನ ಅತೀವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದಾಗಿ ಬಸ್ಸು ರಸ್ತೆ ಪಕ್ಕದ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಪ್ರಯಾಣಿಕರು ಗಾಯಗೊಂಡ ಘಟನೆ ಕುಮಟಾ ತಾಲೂಕಿನ ಮಿರ್ಜಾನ್ ಸಮೀಪದ ಖೈರೆಕ್ರಾಸ್ ಬಳಿ ಸಂಭವಿಸಿದೆ. ರಾಮಚಂದ್ರ ಶಂಕರ ಸಿಂದೆ ಅಪಘಾತಕ್ಕೆ ಕಾರಣನಾದ ಬಸ್ ಚಾಲಕನಾಗಿದ್ದಾನೆ.

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಸಿಬ್ಬಂದಿಗೆ ಸನ್ಮಾನ

ಈತ ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಕೆ.ಎಸ್. ಆರ್.ಟಿ.ಸಿ. ಬಸ್‌ನ್ನು ಅತಿ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕುಮಟಾ ತಾಲೂಕಿನ ಖೈರೆ ಕ್ರಾಸ್ ಬಳಿ ಬಸ್ಸನ್ನು ನಿಷ್ಕಾಳಜಿಯಿಂದ ರಸ್ತೆಯ ಎಡಕ್ಕೆ ಚಲಾಯಿಸಿ ರಸ್ತೆ ಪಕ್ಕದ ಡಿವೈಡರ್ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಬಸ್ಸನ್ನು ನಿಯಂತ್ರಿಸಲಾಗದೇ ರಸ್ತೆ ಬದಿಯ ಗಟಾರದಲ್ಲಿ ಕೆಡವಿದ್ದಾನೆ. ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕುಮಟಾ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಕುಮಟಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version