Follow Us On

WhatsApp Group
Important
Trending

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು

ಸಿದ್ದಾಪುರ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು 112 ಗೆ ಕರೆ ಮಾಡಿ 108 ವಾಹನದ ಮೂಲಕ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟ ಘಟನೆ ತಾಲೂಕಿನ ಬೀರ್ಲಮಕ್ಕಿ ಸಮೀಪದಲ್ಲಿ ನಡೆದಿದೆ. ಕಳೆದ ಹಲವಾರು ದಿನಗಳಿಂದ ಸಿದ್ದಾಪುರ ಕುಮಟಾ ಮುಖ್ಯ ರಸ್ತೆಯಲ್ಲಿ ಹಾಗೂ ಬೀರ್ಲ ಮಕ್ಕಿ ಆಸು ಪಾಸಿನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ವ್ಯಕ್ತಿ ಓಡಾಡುತ್ತಿದ್ದ.

ನಿಯಂತ್ರಣ ತಪ್ಪಿ ಮುಗುಚಿದ ಟ್ಯಾಂಕರ್! ಚಾಲಕ ಪ್ರಾಣಾಪಾಯದಿಂದ ಪಾರು

ಶಾಲಾ-ಕಾಲೇಜುಗಳು ಪುನರಾರಂಭಗೊಳುತ್ತಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಉಳಿದುಕೊಳ್ಳುತ್ತಿದ್ದ ಈ ವ್ಯಕ್ತಿಯಿಂದ ತೊಂದರೆಗಳಾಗಬಹುದು ಎಂದು ಸಾಮಾಜಿಕ ಹೋರಾಟಗಾರ ರಾಘು ನಾಯ್ಕ್ ಬಿರ್ಲಮಕ್ಕಿ ಹಾಗೂ ಆತನ ಸ್ನೇಹಿತರು ರವಿವಾರ ಸಂಜೆ 112 ಗೆ ಕರೆ ಮಾಡಿ ತಿಳಿಸಿದ್ದಾರೆ, ನಂತರ ಸ್ಥಳಕ್ಕೆ ಬಂದ 112 ಸಿಬ್ಬಂದಿಗಳು ಆತನನ್ನ ವಿಚಾರಿಸಿ 108 ವಾಹನದ ಮೂಲಕ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲಿ ಕರೆಗೆ ಸ್ಪಂದಿಸಿ ಸಹಕರಿಸಿದ 113 ಸಿಬ್ಬಂದಿಗಳು ಹಾಗೂ 108 ಸಿಬ್ಬಂದಿಗಳಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಸ್ಮಯ ನ್ಯೂಸ್ ದಿವಾಕರ್ ಸಂಪಖoಡ ಸಿದ್ದಾಪುರ

Back to top button