20 ಕ್ವಿಂಟಲ್ ಅಡಿಕೆ ಕಳ್ಳತನ: ಆರೋಪಿಯ ಬಂಧನ

ಯಲ್ಲಾಪುರ: ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ಗೋಪಾಲಕೃಷ್ಣ ಭಾಗ್ವತ್ ಎನ್ನುವವರ ಮನೆಯಲ್ಲಿ ಕಳ್ಳರು ಮನೆಯ ಹಿಂಬದಿ ಗೋಡೆಯನ್ನು ಒಡೆದು ಸುಮಾರು ಸುಮಾರು 20 ಕ್ವಿಂಟಾಲ್ ಒಣ ಅಡಿಕೆಯನ್ನು ಕದ್ದೊಯ್ದಿದ್ದರು. ಈ ಕುರಿತಂತೆ ಯಲ್ಲಾಪುರ ಪೋಲೀಸ್ ಠಾಣೆಯಲ್ಲಿ ಅಕ್ಟೋಬರ್ 19 ರಂದು ಗೋಪಾಲಕೃಷ್ಣ ಭಾಗ್ವತ್ ಅವರು ದೂರು ದಾಖಲಿಸಿದ್ದರು.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು

ಈ ಪ್ರಕರಣಕ್ಕೆ ಸಂಬoಧಿಸಿದoತೆ ತನಿಖೆ ಕೈಗೊಂಡ ಪೋಲೀಸರು ಯಲ್ಲಾಪುರ ಪಟ್ಟಣದ ಕಾಳಮ್ಮ ನಗರದ ಮಂಜುನಾಥ ಮಹೇಶ ಸಿದ್ಧಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ತನ್ನ ಸಹಚರರೊಂದಿಗೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈತನಿಂದ 1 ಕ್ವಿಂಟಾಲ್ 92 ಕೆಜಿ ಕಳ್ಳತನ ಮಾಡಿರುವ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಿದ್ದು ಆತನ ಪತ್ತೆಗೆ ಕಾರ್ಯಚರಣೆ ನಡೆದಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version