Join Our

WhatsApp Group
Focus News
Trending

ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಬ್ರಂದಾವನ ತಂಡ ಚಾಂಪಿಯನ್

ಭಟ್ಕಳ: ಮುಟ್ಟಳ್ಳಿ ಮೂಡಭಟ್ಕಳದಲ್ಲಿ ಕ್ರಿಯೇಟಿವ್ ಫ್ರೆಂಡ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಏರ್ಪಡಿಸಿದ 60 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಸ್ಥಳಿಯ ಬ್ರಂದಾವನ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಸೆಟಸಾಟದಲ್ಲಿ ಸೋತ ದಿಂಪನ್ ವಾರಿಯರ್ಸ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.

ಮೇ 3 ರಾತ್ರಿ ಕಬ್ಬಡಿ ಪಂದ್ಯಾವಳಿ ಉದ್ಘಾಟನೆ ಕಂಡಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿ ಶ್ರೀಧರ್ ನಾಯ್ಕ, ಮುಟ್ಟಳ್ಳಿ ಭಾಗದಲ್ಲಿ ಕಬಡ್ಡಿಗೆ ವಿಶೇಷ ಪ್ರೋತ್ಸಾಹವಿದೆ. ಕಬಡ್ಡಿ ಪಂದ್ಯಾವಳಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೂ ತಾನೂ ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಕ್ರಿಯೇಟಿವ್ ಪ್ರೆಂಡ್ಸ್ ಕ್ರೀಡಾ ಮತ್ತು ಸಾಂಸ್ಕ್ರತಿಕ ಸಂಘದ ಬೆನ್ನೆಲುಬಾಗಿ ಯುವಕರನ್ನು ಹುರಿದುಂಬಿಸುತ್ತಿರುವ ಭಟ್ಕಳ ಸೌಹಾರ್ದ ಸಹಕಾರಿ ನಿಯಮಿತ. ಭಟ್ಕಳ ಹಾಗೂ ಬಿಜೆಪಿ ಭಟ್ಕಳ ಮಂಡಳದ ಅಧ್ಯಕ್ಷ ಶ್ರೀನಿವಾಸ ನಾಯ್ಕ ಮಾತನಾಡಿ ಕ್ರಿಯೇಟಿವ್ ಫ್ರೇಂಡ್ಸ ಸಂಘವು ಕೆಲವೇ ಸಮಯದ ಹಿಂದೆ ಸ್ಥಾಪನೆಗೊಂಡಿದ್ದು ಇದೀಗ ಪೂರ್ಣ ಪ್ರಮಾಣದ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಿದೆ. ಸಂಘ ಕೇವಲ ಕ್ರೀಡಾಕೂಟ ಮಾತ್ರ ಆಯೋಜಿಸುವುದಲ್ಲದೆ ಮುಂದಿನ ದಿನಗಳಲ್ಲಿ ರಕ್ತದಾನ ಶಿಬಿರದಂತ ಸಾಮಾಜಿಕ ಕಾರ್ಯಕ್ರಮವು ನಡೆಸುವಂತಾಗಲಿ. ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಭಟ್ಕಳ ಮಂಡಳದ ಪ್ರಧಾನ ಕಾರ್ಯದರ್ಶಿ ಶ್ರೀಧರ ನಾಯ್ಕ, ಮುಟ್ಟಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಲಕ್ಷ್ಮೀ ನಾಯ್ಕ, ಅಧ್ಯಕ್ಷೆ ರಜನಿ ವೆಂಕಟರಮಣ ನಾಯ್ಕ ಮಾತನಾಡಿದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ಊರಿನ‌ ಪ್ರತಿಭಾನ್ವಿತ ಯುಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ ನಾರಾಯಣ ನಾಯ್ಕ ಸ್ವಾಗತಿಸಿದರು, ಮಾಧ್ಯಮ‌ ವರದಿಗಾರ ಈಶ್ವರ ನಾಯ್ಕ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮಹೇಶ ನಾಯ್ಕ, ಶೇಷಗಿರಿ ನಾಯ್ಕ, ಮಾಸ್ತಪ್ಪ ನಾಯ್ಕ ಮತ್ತಿತರರು ಹಾಜರಿದ್ದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Back to top button