
ಯಲ್ಲಾಪುರ: ಶಾಸಕರಾದ ಶಿವರಾಮ್ ಹೆಬ್ಬಾರ್ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಹೆಬ್ಬಾರ್ ಅವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.
ಉಚ್ಚಾಟನೆ ಬೆನ್ನಲ್ಲೇ ಮಾತನಾಡಿರುವ ಹೆಬ್ಬಾರ್, ‘ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ನಾನು ಹೇಳುತ್ತೇನೆ. ಪಕ್ಷದ ವಿರುದ್ಧ ನಾನು ಮಾತನಾಡಲು ಕಾರಣ ಏನೆಂದು ತಿಳಿಸುತ್ತೇನೆ. ನನ್ನ ಮುಂದಿನ ತೀರ್ಮಾನದ ಬಗ್ಗೆ ಕಾದು ನೋಡಿ’ ಎಂದು ಹೆಬ್ಬಾರ್ ಹೇಳಿದ್ದಾರೆ.
‘ಯಾವುದೇ ಸಭೆ, ಸಮಾರಂಭಗಳಿಗೆ ನನ್ನನ್ನು ಕರೆಯುತ್ತಿರಲಿಲ್ಲ. ಸಭೆ, ಸಮಾರಂಭಗಳಿಗೆ ಕರೆಯದಿದ್ದರೆ ಹೋಗಲು ಆಗುತ್ತಾ? ಮುಂದಿನ ವಾರ ಬೆಂಗಳೂರಿಗೆ ಬಂದು ಎಲ್ಲವನ್ನೂ ಹೇಳುತ್ತೇನೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,