Join Our

WhatsApp Group
Important

ಬಸ್ , ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೊನ್ನಾವರ: ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೆ ಸಾವು, ಹಿಂಬದಿ ಸವಾರ ಗಾಯಗೊಂಡ ಘಟನೆ ಗೇರುಸೊಪ್ಪ ಬಳಿ ರವಿವಾರ ನಡೆದಿದೆ.

ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69 ರ ಹೊನ್ನಾವರ-ಗೇರುಸೊಪ್ಪ ರಸ್ತೆಯ ವ್ಯೂ ಪಾಯಿಂಟ್ ಹತ್ತಿರ ವಾಟೆಹಳ್ಳ ಬಳಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೆ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿದ್ದಾನೆ.

ಭಟ್ಕಳ ಡಿಪೋ ಬಸ್ ಹೊನ್ನಾವರ ಕಡೆಯಿಂದ ಶಿರಸಿಗೆ ತೆರಳುತ್ತಿದ್ದು, ಬೈಕ್ ಸವಾರ ಜೋಗ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಸಾಗರ ಮೂಲದ ನಜೀಮ್ ಪಾಶ(30) ಮೃತಪಟ್ಟಿದ್ದು, ಆಯಾನ್ ಸಾಗರ ಗಾಯಗೊಂಡ ಬೈಕ್ ಹಿಂಬದಿ ಸವಾರನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ವಿವೇಕ್ ಶೇಟ್ ಹೊನ್ನಾವರ

Back to top button