Join Our

WhatsApp Group
Important
Trending

ಜೂನ್ 12 ರಿಂದ 14ರ ವರೆಗೆ ಭಾರೀ ಮಳೆ: ಹಲವೆಡೆ ರೆಡ್ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆ

ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಜೂ.12 ರಿಂದ 14ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಗಾಳಿ ಸಹಿತ ಭಾರೀ ಮಳೆಯಾಗಲಿದೆ.

ಉತ್ತರ ಕನ್ನಡ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ ಮುಂದಿನ ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳಿಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿದೆ.

ಸಾರ್ವಜನಿಕರು ಯಾವುದೇ ರೀತಿಯ ಅನಧೀಕೃತ ವದಂತಿಗಳಿಗೆ ಕಿವಿಗೊಡಬಾರದು.ಮುಂದಿನ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್…

Back to top button