Important
Trending

ಭಾರೀ ಮಳೆ ಹಿನ್ನಲೆ: ಶಾಲೆಗಳಿಗೆ ರಜೆ ಘೋಷಣೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 18-08-2025 ರಿಂದ 20-08-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರಿಂದ 6 ರ ಮನವಿ/ಕೋರಿಕೆಯಂತೆ, ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ,ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ರಜೆ ಘೋಷಿಸುವ ಬಗ್ಗೆ ಕೋರಿರುತ್ತಾರೆ.

ಇದನ್ನೂ ಓದಿ: ರೀಲ್ಸ್ ಮಾಡಿ 15 ಸಾವಿರ ನಗದು ಗೆಲ್ಲಿ

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ದಿನಾಂಕ:19-8-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಆದೇಶ ಮಾಡಿದೆ.

ಅದೇಶ: ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ: 19-8-2025 ರಂದು ರಜೆ ಘೋಷಿಸಿ ಆದೇಶಿಸಿದೆ.

ಸದ್ರಿ ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ/ಶಿರಸಿ, ಉಪನಿರ್ದೇಶಕರು ಪದವಿ ಪೂರ್ವ ಕಾಲೇಜು ರವರು ಕಾರ್ಯ ರೂಪಕ್ಕೆ ತರುವುದು ಎಂದು ತಿಳಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button