
ಜೊಯಿಡಾ: ತಾಲೂಕಿನ ವಿರ್ನೋಲಿ ವಲಯದ ಜನತಾಕಾಲೋನಿಯಲ್ಲಿ ಜಿಂಕೆ ಬೇಟೆಯಾಡಿದ 3 ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರಿoದ 16 ಕೆ.ಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ಸಂಬoಧ ಜೊಯಿಡಾ ತಾಲುಕಿನ ಜನತಾ ಕಾಲೋನಿ ನಿವಾಸಿಗಳಾದ ಸಂದೀಪ 36 ವರ್ಷ, ಪರಶುರಾಮ ಅಡಾವ 27 ವರ್ಷ,ಗೋಪಾಲ ಮೇದಾರ 29 ವರ್ಷ ಇವರುಗಳನ್ನು ಬಂಧಿಸಲಾಗಿದೆ. ಇವರಿಂದ 16 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳಲಾಗಿದೆ. ಇನ್ನಷ್ಟು ಆರೋಪಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳ ಮೇಲೆ ವನ್ಯ ಜೀವಿ ಕಾಯಿದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ. ಹಳಿಯಾಳ ಡಿಸಿಎಪ್ ಅಜ್ಜಯ್ಯ ಜಿ.ಅರ್, ಎಸಿಎಪ್ ನಿಂಗಾಣಿ ಅವರ ಮಾರ್ಗದರ್ಶನದಲ್ಲಿ ವಿರ್ನೋಲಿ ವಲಯ ಅರಣ್ಯಾಧಿಕಾರಿ ಬಸವರಾಜ್, ಸಿಬ್ಬಂದಿಗಳಾದ ರಾಮುಗೌಡ,ಬೈಲಾ,ಬಸವನ ಗೌಡ,ಪ್ರವೀಣ ಮ್ಯಾಗೇರಿ, ಶ್ರೀಶೈಲ ಬಾರ್ಲಿ,ಸಂದೀಪ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು
ವಿಸ್ಮಯ ನ್ಯೂಸ್, ಜೋಯ್ಡಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು