ಸ್ಥಳೀಯರೇ ನೀಡಿದರು ಮಾಹಿತಿ: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಮೂವರ ಬಂಧನ

ಕುಮಟಾ: ಹಿಂಸಾತ್ಮಕವಾಗಿ ಅಕ್ರಮವಾಗಿ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಮೂರು ಜಾನುವಾರಗಳನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿರುವ ಘಟನೆ ತಾಲೂಕಿನ ಬಡಾಳದ ಮಂಕಿಬೈಲ್ ಬಳಿ ಘಟನೆ ನಡೆದಿದೆ. ಸ್ಥಳೀಯರು ನೀಡಿದ ಖಚಿತ ಮಾಹಿತಿ ಆಧರಿಸಿ, ಪೊಲೀಸರು ಈ ದಾಳಿ ನಡೆಸಿದ್ದು, ಜಾನುವಾರುಗಳನ್ನು ರಕ್ಷಿಸಿ, ವಾಹನವನ್ನೂ ವಶಕ್ಕೆ ಪಡೆದಿದ್ದಾರೆ.


ಬಂಧಿತರನ್ನು ಹಾವೇರಿಯ ಹಿರೇಕೆರೂರ ನಿವಾಸಿ ನೂರೂಲ್ಲಾ ಮೆಹಬೂಬ ಸಾಬ್, ಸಿದ್ದಾಪುರದ ದೊಡ್ಮನೆ ನಿವಾಸಿ ರಾಘವೇಂದ್ರ ಗಣಪತಿ ನಾಯ್ಕ ಮತ್ತು ಬಡಾಳ ಸೊಪ್ಪಿನಹೊಸಳ್ಳಿಯ ಸುರೇಶ ಕೃಷ್ಣ ಗೌಡ ಎಂದು ತಿಳಿದುಬಂದಿದೆ. ಆರೋಪಿಗಳು ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಮೂರು ಜಾನುವಾರಗಳನ್ನು ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದರು.


ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಕುಮಟಾ ಪೊಲೀಸರು ಬಡಾಳ ಬಳಿ ವಾಹನ ತಡೆದು, ವಾಹನ ಪರಿಶೀಲಿಸಿದ್ದಾರೆ. ಈ ವೇಳೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಕೂಡಲೇ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಬoಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ವಿಸ್ಮಯ ನ್ಯೂಸ್, ಕುಮಟಾ

Exit mobile version