Uttara Kannada
Trending

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಕುಮಟಾ: ತೆಲಂಗಾಣದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕುಮಟಾದ ಮಣಕಿಯ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ.

ಬೆಳಗಿನ ಜಾವ 5 ಘಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದವರಿಗೆ ಹಾಗೂ ಚಾಲಕನಿಗೆ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲವಾಗಿದೆ. ಹೊಂಡಕ್ಕೆ ಬಿದ್ದಂತಹ ಕಾರ್ ಅನ್ನು ಕ್ರೇನ್ ಮೂಲಕ ಮೇಲೆತ್ತಲಾಗಿದ್ದು, ಕೆಲ ಸಮಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ರಾಪಿಕ್ ಜಾಮ್ ಉಂಟಾಗಿತ್ತು.

ವಿಸ್ಮಯ ನ್ಯೂಸ್, ಕುಮಟಾ

ಸೆಲ್ಕೋ ಸೋಲಾರ್ ದೀಪ ಬಳಸಿ, ನಿಮ್ಮ ಮನೆ ಬೆಳಗಿಸಿ

ಸೌರಶಕ್ತಿ ಅಂದರೆ ಕೇವಲ ಬೆಳಕಲ್ಲ
ಅದು ಸ್ವಾವಲಂಬಿ ಬದುಕಿಗೂ ದಾರಿ
ಇದು ಸೆಲ್ಕೋ ಸಂಸ್ಥೆಯ ಗುರಿ
ಸಂಪರ್ಕಿಸಿ: ದತ್ತಾರಾಮ ಭಟ್ಟ, ಮ್ಯಾನೇಜರ್
ಸೆಲ್ಕೋ ಸೋಲಾರ್, ಸನ್ಮಾನ ಹೊಟೇಲ್ ಹತ್ತಿರ
N.H 66, ಕುಮಟಾ
9880003735/9449360181

Back to top button