
ಗೋಕರ್ಣದ ಸೋಮೇಶ್ವರ ದೇವಸ್ಥಾನದಲ್ಲಿ ಕಳ್ಳತನ
ಬಾಗಿಲು ಮುರಿದು ಗರ್ಭಗುಡಿ ಪ್ರವೇಶ
ಗೋಕರ್ಣ: ಕಳೆದ ಒಂದು ವಾರದಿಂದ ಜಿಲ್ಲೆಯ ಹಲವೆಡೆ ಕಳ್ಳತನ ಪ್ರಕರಣ ವರದಿಯಾಗುತ್ತಲೇ ಇದೆ. ಅಂಕೋಲಾ ತಾಲೂಕಿನ ನಾಲ್ಕೈದು ಕಡೆ ಕಳ್ಳತನ ಕೇಸ್ ದಾಖಲಾದ ಬೆನ್ನಲ್ಲೆ, ಈಗ ಕುಮಟಾ ತಾಲೂಕಿನ ಗೋಕರ್ಣದಲ್ಲೂ ಕಳ್ಳತನ ಬೆಳಕಿಗೆ ಬಂದಿದೆ.
ಗೋಕರ್ಣದ ಸೋಮೇಶ್ವರ ದೇವಸ್ಥಾನದಲ್ಲಿ ಕಳ್ಳತನ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳ ಕಳುವಾಗಿದೆ. ದೇವಸ್ಥಾನದ ಬಾಗಿಲ ಬೀಗ ಮುರಿದು ಗರ್ಭಗುಡಿ ಪ್ರವೇಶಿಸಿದ ಕಳ್ಳರು ಬೆಳ್ಳಿಯ ಪೀಟ, ಬೆಳ್ಳಿಯ ದೇವರ ಪ್ರಭಾವಳಿ, ಶಿವನಮೂರ್ತಿ, ಬಂಗಾರದ ಲಾಕೇಟ್ ಕದ್ದು ಪರಾರಿಯಾಗಿದ್ದಾರೆ.
ಸುಮಾರು ಮೂರುವರೆ ಲಕ್ಷ ಮೌಲ್ಯದ ಆಭರಣ ಕಳುವಾಗಿದೆ ಎಂಬ ಮಾಹಿತಿ ಲಭಿಸಿದೆ. ಮಾಹಿತಿ ಹಿನ್ನಲೆಯಲ್ಲಿ ಕುಮಟಾ ಸಿಪಿಐ ಪರಮೇಶ್ವರ ಗುನಗ ಮತ್ತು ಗೋಕರ್ಣ ಪಿಎಸ್ಐ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂಬoಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ