![](http://i0.wp.com/vismaya24x7.com/wp-content/uploads/2020/10/gokarna-1.jpg?fit=367%2C442&ssl=1)
ಗೋಕರ್ಣದ ಸೋಮೇಶ್ವರ ದೇವಸ್ಥಾನದಲ್ಲಿ ಕಳ್ಳತನ
ಬಾಗಿಲು ಮುರಿದು ಗರ್ಭಗುಡಿ ಪ್ರವೇಶ
ಗೋಕರ್ಣ: ಕಳೆದ ಒಂದು ವಾರದಿಂದ ಜಿಲ್ಲೆಯ ಹಲವೆಡೆ ಕಳ್ಳತನ ಪ್ರಕರಣ ವರದಿಯಾಗುತ್ತಲೇ ಇದೆ. ಅಂಕೋಲಾ ತಾಲೂಕಿನ ನಾಲ್ಕೈದು ಕಡೆ ಕಳ್ಳತನ ಕೇಸ್ ದಾಖಲಾದ ಬೆನ್ನಲ್ಲೆ, ಈಗ ಕುಮಟಾ ತಾಲೂಕಿನ ಗೋಕರ್ಣದಲ್ಲೂ ಕಳ್ಳತನ ಬೆಳಕಿಗೆ ಬಂದಿದೆ.
ಗೋಕರ್ಣದ ಸೋಮೇಶ್ವರ ದೇವಸ್ಥಾನದಲ್ಲಿ ಕಳ್ಳತನ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳ ಕಳುವಾಗಿದೆ. ದೇವಸ್ಥಾನದ ಬಾಗಿಲ ಬೀಗ ಮುರಿದು ಗರ್ಭಗುಡಿ ಪ್ರವೇಶಿಸಿದ ಕಳ್ಳರು ಬೆಳ್ಳಿಯ ಪೀಟ, ಬೆಳ್ಳಿಯ ದೇವರ ಪ್ರಭಾವಳಿ, ಶಿವನಮೂರ್ತಿ, ಬಂಗಾರದ ಲಾಕೇಟ್ ಕದ್ದು ಪರಾರಿಯಾಗಿದ್ದಾರೆ.
ಸುಮಾರು ಮೂರುವರೆ ಲಕ್ಷ ಮೌಲ್ಯದ ಆಭರಣ ಕಳುವಾಗಿದೆ ಎಂಬ ಮಾಹಿತಿ ಲಭಿಸಿದೆ. ಮಾಹಿತಿ ಹಿನ್ನಲೆಯಲ್ಲಿ ಕುಮಟಾ ಸಿಪಿಐ ಪರಮೇಶ್ವರ ಗುನಗ ಮತ್ತು ಗೋಕರ್ಣ ಪಿಎಸ್ಐ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂಬoಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ
- ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ