Important
Trending

ಶಿರಸಿ-ಕುಮಟಾ ಹೆದ್ದಾರಿ ಕಾಮಗಾರಿ ಮುಂದಕ್ಕೆ: ಮತ್ತೆ ಯಾವಾಗ ಆರಂಭ?

ನಾಳೆ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸಭೆ
ಬಗೆಹರಿಯಲಿದೆ ಪರ್ಯಾಯ ವ್ಯವಸ್ಥೆಯ ಗೊಂದಲ

ಕುಮಟಾ: ಸಾಗರಮಾಲಾ ಯೋಜನೆಯಡಿಯಲ್ಲಿ ಜಿಲ್ಲೆಯ ಶಿರಸಿ,ಕುಮಟಾ ರಸ್ತೆಯ ಅಗಲೀಕರಣ ಕಾರ್ಯ ಪ್ರಾರಂಭಕ್ಕೆ ದಿನಾಂಕ ನಿಗದಿಯಾಗಿತ್ತು. ಈ ಹಿನ್ನಲೆಯಲ್ಲಿ ಅಕ್ಟೋಬರ್ 12 ರಿಂದ 18 ತಿಂಗಳುಗಳ ಕಾಲ ಇಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಪಪಡಿಸಿದ್ದರು. ಆದರೆ, ಪರ್ಯಾಯ ಮಾರ್ಗದ ಗೊಂದಲದಿoದಾಗಿ ಈ ಕಾಮಗಾರಿ ಕೆಲದಿನಗಳ ಕಾಲ ಮುಂದೂಡಲ್ಪಟ್ಟಿದೆ.


ಕಾಮಗಾರಿ ಪ್ರಾರಂಭ ಕೆಲದಿನಗಳ ಕಾಲವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದ್ದು, ಎಂದಿನoತೆ ವಾಹನ ಸಂಚಾರ ಕಂಡುಬoದಿದೆ. ಶಿರಸಿಯಿಂದ ಕುಮಟಾ- ಕಾರವಾರಕ್ಕೆ ತೆರಳುವ ವಾಹನಗಳಿಗೆ ತೊಂದರೆ ಉಂಟಾಗಲಿದೆ. ಅದಕ್ಕೆ ಪರ್ಯಾಯ ಮಾರ್ಗವಾಗಿ ಕುಮಟಾಕ್ಕೆ ಹೋಗುವ ಲಘು ವಾಹನಗಳು ಸಿದ್ದಾಪುರ ಮಾರ್ಗವಾಗಿ ತೆರಳಬಹುದು, ಇನ್ನು ಅಂಕೋಲಾ-ಕಾರವಾರಕ್ಕೆ ತೆರಳುವವರು ಯಲ್ಲಾಪುರ ಮಾರ್ಗವಾಗಿ ಎನ್ಎಚ್ 63 ನಲ್ಲಿ ಸಂಚರಿಸಬಹುದಾಗಿದೆ ಮತ್ತು ಭಾರೀ ಸೇರಿ ಎಲ್ಲಾ ತರಹದ ವಾಹನಗಳು ಶಿರಸಿಯಿಂದ- ಸಿದ್ದಾಪುರ- ಮಾವಿನಗುಂಡಿ- ಹೊನ್ನಾವರ- ಮಂಗಳೂರಿಗೆ ಸಂಚರಿಸಬಹುದಾಗಿದೆ ಎಂಬ ವರದಿಗಳು ಕೇಳಿಬಂದಿದ್ದವು.


ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಿ.ಡಬ್ಲ್ಯು.ಡಿ ಎಂಜಿನಿಯರ್‌ಗಳು, ಸಾರಿಗೆ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳ ಸಭೆಕರೆದು ಅಂತಿಮ ನಿರ್ಣಯ ತೆಗೆದುಕೊಳ್ಳುವಂತೆ ಕುಮಟಾ ಸಹಾಯಕ ಆಯುಕ್ತರಾದ ಅಜೀತ್ ಎಮ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಈ ಕುರಿತಾಗಿ ನಮ್ಮ ವಿಸ್ಮಯ ಟಿ.ವಿ ಗೆ ಸಹಾಯಕ ಆಯುಕ್ತರಾದ ಅಜಿತ್ ಎಮ್ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ 14 ರ ಬುಧವಾರದಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಂಬoಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ. ಆ ಒಂದು ಸಭೆಯಲ್ಲಿ ಕುಮಟಾ-ಶಿರಸಿ ಹೆದ್ದಾರಿ ಕಾಮಗಾರಿ ಪ್ರಾರಂಭದ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು.
-ಅಜಿತ್ ಎಮ್, ಸಹಾಯಕ ಆಯುಕ್ತರು, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button