ಜಲಪಾತ ವೀಕ್ಷಿಸಿ ಮರಳುತ್ತಿದ್ದಾಗ ದುರ್ಘಟನೆ
ಅರ್ಧ ಕೀಲೋಮೀಟರ್ ಕೊಚ್ಚಿಕೊಂಡು ಹೋದ ಕಾರು
ಕಾರಿನಲ್ಲಿ ಇದ್ದರು ಆರು ಮಂದಿ?
ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, ನಾಲ್ವರು ಮೃತಪಟ್ಟಿದ್ದಾನೆ ಎನ್ನಲಾಗಿದೆ. ತಲೂಕಿನ ಕೋಡನಮನೆ ಎಂಬಲ್ಲಿ ಸೇತುವೆಯಿಂದ ಕೆಳಗುರುಳಿದ ಕಾರು ನೀರಿನಲ್ಲೇ ಅರ್ಧ ಕಿಲೋ ಮೀಟರ್ ದೂರ ಹೋಗಿ ಬಿದ್ದಿದೆ. ಆದರೆ ಕಾರಿನ ಬಾಗಿಲುಗಳು ಇನ್ನೂ ಮುಚ್ಚಿಯೇ ಇದ್ದು ಪೊಲೀಸರು ಸ್ಥಳಕ್ಕೆ ಬಂದ ನಂತರ ನಿಖರ ಮಾಹಿತಿ ತಿಳಿಯಬೇಕಿದೆ.
ಉಂಚಳ್ಳಿ ಜಲಪಾತ ವೀಕ್ಷಿಸಿ ಮರುಳುತ್ತಿದ್ದಾಗ ಹುಬ್ಬಳ್ಳಿ ಮೂಲದ ಆರು ಮಂದಿ ಇದ್ದ ಕಾರು ಕೋಡ್ನಮನೆ ಎಂಬಲ್ಲಿ ಸೇತುವೆಯಿಂದ ಕೆಳಗುರುಳಿದೆ. ಕಾರು ನೀರಿನಲ್ಲೇ ಅರ್ಧ ಕಿಲೋ ಮೀಟರ್ ದೂರ ಹೋಗಿ ಬಿದ್ದಿದ್ದು, ಗುರುವಾರ ಮಧ್ಯಾಹ್ನದ ಹೊತ್ತಿಗೆ ಈ ವಿಷಯ ಬೆಳಕಿಗೆ ಬಂದಿದೆ.
ಕಾರಿನಲ್ಲಿ ಎಷ್ಟು ಜನರಿದ್ದರು ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ, ಕಾರ್ಯಾಚರಣೆ ಪ್ರಗತಿಯಲ್ಲಿದೆ. ನಿನ್ನೆ ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎನ್ನಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸರ್ಕಾರಿ ಶಾಲಾ ಮುಖ್ಯಾಧ್ಯಾಪಕ ಅಕಾಲಿಕ ವಿಧಿವಶ. ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಹಾರಿಹೋದ ಪ್ರಾಣಪಕ್ಷಿ
- ರಾಸಾಯನಿಕ ಸೋರಿಕೆ: 18 ಕಾರ್ಮಿಕರು ಅಸ್ವಸ್ಥ
- ಲೋಕಮಾತಾ ಅಹಿಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಮಾನೋತ್ಸವ
- ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ನೇಣಿಗ ಶರಣು?ಗಂಡ ಬಂದು ನೋಡುವಷ್ಟರಲ್ಲಿ ಹಾರಿ ಹೋಗಿತ್ತು ಪ್ರಾಣ ಪಕ್ಷಿ,
- ಹಿರಿಯ ನಾಗರಿಕ ಗೋವಿಂದ್ರಾಯ ಕಾಮತ ವಿಧಿವಶ : ಯಕ್ಷಗಾನ ಕಲಾವಿದ, ಪಾಕ ಪ್ರವೀಣ , ಗಾಂಧೀ ಟೋಪಿಧಾರಿ ಇನ್ನಿಲ್ಲ